4:41 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೊರನಾಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅನ್ನಪೂರ್ಣೇಶ್ವರಿ ದೇವಿಯ ದರ್ಶನ

19/01/2024, 17:10

ಹೊರನಾಡು(reporterkarnataka.com) : ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಚಿಕ್ಕಮಗಳೂರಿನ ಕಳಸ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಧನ ಪಡೆದರು.

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸಚಿವರಿಗೆ ಸ್ವಾಗತ ನೀಡಿ ಬರಮಾಡಿಕೊಂಡರು. ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಶ್ರೀ ಕ್ಷೇತ್ರದಲ್ಲಿ ಮೊಮ್ಮಗಳಿಗೆ ಅನ್ನಪ್ರಾಶನ ಕೈಂಕರ್ಯ ನಡೆಸಿದರು.
ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ್ ಮಸಣಗಿ, ರಾಜೇಂದ್ರ ಹೆಬ್ಬಾರ್, ಮೊಹಮದ್ ರಫಿಕ್, ವೀರೇಂದ್ರ, ‌ಸುಧಾಕರ್, ಸುಕುರು, ಶಂಸುದ್ದೀನ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಮಧು ಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು