11:24 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಯ್ಯಪ್ಪ ಮಾಲಾಧಾರಿಗಳ ಸಾವು: ಮಾನವೀಯತೆ ಮೆರೆದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್

19/01/2024, 18:13

*ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಮೂವರ ಮಾಲಧಾರಿಗಳ ಶವ ಪತ್ತೆ*

*ಕಪಿಲಾ ನದಿಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಮಾಲಧಾರಿಗಳ ಕುಟುಂಬಕ್ಕೆ ಸ್ಥಳದಲ್ಲಿಯೇ ವೈಯಕ್ತಿಕ ಪರಿಹಾರ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ*

*ಮಾಲಾಧಾರಿಗಳ ಸ್ವಗ್ರಾಮಕ್ಕೆ ಶವ ತಲುಪಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ಶಾಸಕ ದರ್ಶನ್ ಧ್ರುವನಾರಾಯಣ*

ಮೋಹನ್ ನಂಜನಗೂಡು ಮೈಸೂರು

info reporterkarnataka@gmail.com
ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ ಸುಳಿಗೆ ಸಿಲುಕಿ ಮೂವರು ಮಾಲಾದಾರಿಗಳು ಸಾವನ್ನಪ್ಪಿರುವ ವಿಚಾರ ತಿಳಿದು ನಂಜನಗೂಡಿನ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಲೂಕಿನಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನು ಅರ್ಧಕ್ಕೆ ಮೋಟಕುಗೊಳಿಸಿ ಘಟನೆ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮತ್ತು ಪೊಲೀಸರಿಗೆ ಸಾವನಪ್ಪಿರುವ ಮೂವರ ಮಾಲಾದಾರಿಗಳ ಶವವನ್ನು ಹೊರ ತೆಗೆಯಲು ಚುರುಕುಕರ ಚರಣೆ ನಡೆಸಬೇಕು ಆದಷ್ಟು ಬೇಗ ಮೃತ ಮಾಲಾಧಾರಿಗಳ ಶವವನ್ನು ಅವರ ಸ್ವಗ್ರಾಮಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳಿಗೆ ತಾಕಿತು ಮಾಡಿದರು.
ಕೂಡಲೇ ಶಾಸಕರ ಮಾತಿಗೆ ಎಚ್ಚೆತ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನದಿಯಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಸಾವನಪ್ಪಿದ ಮೂವರು ಮಾಲದಾರಿಗಳ ಶವವನ್ನು ಹೊರ ತೆಗೆದು ಶಾಸಕ ದರ್ಶನ್ ಧ್ರುವ ನಾರಾಯಣ ಸ್ಥಳದಲ್ಲಿ ಕಣ್ಣೀರಿಟ್ಟು ಮೂವರಿಗೆ ವೈಯಕ್ತಿಕ ಪರಿಹಾರ ನೀಡಿ ಉಚಿತ ವಾಹನದ ವ್ಯವಸ್ಥೆಯನ್ನು ಕಲ್ಪಿಸಿ ಮೃತ ಮಾಲದಾರಿಗಳ ಸ್ವಗ್ರಾಮಕ್ಕೆ ಶವಗಳು ತೆರಳಲು ಅನುವು ಮಾಡಿಕೊಟ್ಟರು.

ಶಾಸಕ ದರ್ಶನ್ ಧ್ರುವ ನಾರಾಯಣ್ ರವರ ಮಾನವೀಯ ಕಳಕಳಿಯನ್ನು ಸ್ಥಳದಲ್ಲಿ ಗಮನಿಸಿದ ನಂಜನಗೂಡಿನ ಜನತೆ ಮತ್ತು ಭಕ್ತ ಸಮೂಹ ಕ್ಷಣ ಕಾಲ ಮೌನಕ್ಕೆ ಶರಣಾದರು.

ಇತ್ತೀಚಿನ ಸುದ್ದಿ

ಜಾಹೀರಾತು