12:20 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಂದ ಬಡ ರೋಗಿಗಳ ಲೂಟಿ: ಹಣ ಹಿಂತಿರುಗಿಸುವಂತೆ ಚಾಟಿ ಬೀಸಿದ ಜಿಲ್ಲಾಧಿಕಾರಿ

08/08/2021, 11:30

ಮಂಗಳೂರು(reporterkarnataka.com): ನಗರದ 7 ಖಾಸಗಿ ಆಸ್ಪತ್ರೆಗಳಿಂದ ಹಣ ಕಕ್ಕಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮುಂದಾಗಿದ್ದಾರೆ. ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಹಣ ವಾಪಸ್ ನೀಡುವಂತೆ ಜಿಲ್ಲಾಧಿಕಾರಿ  ಈ ಆಸ್ಪತ್ರೆಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.

ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಮಾಡಿದ ಬಗ್ಗೆ ಮತ್ತು ರೋಗಿಗಳಿಂದ ಹೆಚ್ಚುವರಿ ಬಿಲ್ ಪಡೆದ ಖಾಸಗಿ  ಆಸ್ಪತ್ರೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಫುಲ್ ಗರಂ ಆಗಿದ್ದಾರೆ.


ಜಿಲ್ಲಾಧಿಕಾರಿಯವರು ಸಂತ್ರಸ್ತ ರೋಗಿಗಳಿಗೆ ಒಂದು ವಾರದೊಳಗೆ ಹಣ ಪಾವತಿಸುವಂತೆ ಸೂಚಿಸಿದ್ದಾರೆ. ರೋಗಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವಂತೆ ಆದೇಶ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಸ್ವೀಕೃತಿ ರಶೀದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ರವಾನಿಸುವಂತೆ ನಿರ್ದೇಶನ ನೀಡಿದ್ದಾರೆ.

ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ ಇರುವ ಕೆಎಂಸಿ, ಅಥೆನಾ ಆಸ್ಪತ್ರೆ, ಇಂಡಿಯಾನ, ಶ್ರೀನಿವಾಸ ಆಸ್ಪತ್ರೆ, ದೇರಳಕಟ್ಟೆಯ ಕಣಚೂರು ಆಸ್ಪತ್ರೆ, ಎಸ್ ಸಿಎಸ್ ಹಾಗೂ ಕೆ. ಎಸ್. ಹೆಗ್ಡೆ ಆಸ್ಪತ್ರೆಗಳು ಅಧಿಕ ಬಿಲ್ ಹಾಗೂ ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆಯ ಪಟ್ಟಿಗೆ ಸೇರಿವೆ. ತಕ್ಷಣ ರೋಗಿಗಳಿಗೆ ಹಣ ವಾಪಸ್ ನೀಡುವಂತೆ ಈ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಹೆಚ್ಚುವರಿ ಹಣ ವಸೂಲಿ ಕುರಿತಂತೆ ಸಂಬಂಧಿಸಿದ ರೋಗಿಗಳು ಆಸ್ಪತ್ರೆಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಯವರು ಹಣ ವಾಪಸ್ ನೀಡುವಂತೆ  ಆಗಸ್ಟ್ 2ರಂದು ನೀಡಿದ ಆದೇಶದಲ್ಲಿ ತಾಕೀತು ಮಾಡಿದ್ದಾರೆ.

ರಾಜೇಶ್ ಎಂಬವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವ ಬದಲು ಡಿಲಕ್ಸ್ ರೂಮ್ ನಲ್ಲಿ ಚಿಕಿತ್ಸೆ ನೀಡಿ ಯೋಜನೆಯಡಿ ಚಿಕಿತ್ಸೆ ನೀಡಲು ತಪ್ಪಿಸಿದ ಆರೋಪ ಎದುರಿಸಿದ ಅಥೆನಾ ಆಸ್ಪತ್ರೆಗೆ 50 ಸಾವಿರ ರೂ.ವನ್ನು ರೋಗಿಗೆ ಹಿಂತಿರುಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಶಂಶುದ್ದೀನ್ ಪ್ರಕರಣದಲ್ಲಿ ಕೆಎಂಸಿ ಆಸ್ಪತ್ರೆ 78 ಸಾವಿರ ರೂ., ಮಹಮ್ಮದ್ ಕೆ. ಹುಸೈನ್ ಪ್ರಕರಣದಲ್ಲಿ ಇಂಡಿಯಾನ ಆಸ್ಪತ್ರೆ 50 ಸಾವಿರ ರೂ.,ಪದ್ಮನಾಭ ಪ್ರಕರಣದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ10 ಸಾವಿರ ರೂ.,ತುಕರಾಮ್ ಪ್ರಕರಣದಲ್ಲಿ ಎಸ್ ಸಿಎಸ್ ಆಸ್ಪತ್ರೆ 1.50 ಲಕ್ಷ ರೂ.,ಸಯ್ಯದ್ ಮೊಯುದ್ದೀನ್ ಪ್ರಕರಣದಲ್ಲಿ ದೇರಳಕಟ್ಟೆ ಕಣಚೂರು ಆಸ್ಪತ್ರೆ 20 ಸಾವಿರ ರೂ. ಹಾಗೂ ಪಾರ್ವತಿ ಪ್ರಕರಣದಲ್ಲಿ ಶ್ರೀನಿವಾಸ ಆಸ್ಪತ್ರೆ 11,067 ರೂ. ಹಿಂತಿರುಗಿಸುವಂತೆ ಡಿಸಿ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು