10:25 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ‌ಸೌಲಭ್ಯ

20/01/2024, 13:01

ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ‌ಸೌಲಭ್ಯ ಒದಗಿಸಲಾಗಿದೆ.
80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈಗ ನಿಷೇಧವಿದೆ. ಆದರೆ ಆಗ ಸಿಂಪಡಿಸಿದ ಎಂಡೋಸಲ್ಫಾನ್ ನಿಂದ ಆ ಭಾಗದ ಜನರು ನರ ದೌರ್ಬಲ್ಯ, ಮಾಂಸ ಖಂಡಗಳ ಸೆವೆತ, ಬುದ್ದಿ ಮಾಂದ್ಯತೆ, ಬಂಜೆತನ ಇನ್ನಿತ್ಯಾದಿ ಸಮಸ್ಯೆ ಗಳಿಂದ ಬಳಲುತ್ತಿದ್ದಾರೆ. ಎಂಡೋ ಸಲ್ಫಾನ್ ಪೀಡಿತರ ಹಲವು ಬೇಡಿಕೆಗಳಲ್ಲಿ ಉತ್ತಮ ಫಿಸಿಯೋಥೆರಪಿ ‌ಸೌಲಭ್ಯ ಕೂಡ ಒಂದು. ಅದು ಮನೆಗೆ ಹತ್ತಿರವಿದ್ದರೆ ಒಳಿತು. ಎಂಡೋ ಸಲ್ಫಾನ್ ಪೀಡಿತರಿಗೆ ಆರೋಗ್ಯ ಚಿಕಿತ್ಸೆ ಶಿಬಿರ ನಡೆಸಿದ ಒನ್ ಗುಡ್ ಸ್ಟೆಪ್ ಸಂಸ್ಥೆಯು ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ, ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಕಟ್ಟಡದಲ್ಲಿ ಸುಸಜ್ಜಿತ ಆಧುನಿಕ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುತ್ತಿದೆ. ದಿನಾಂಕ ಜನವರಿ ೨೦ ರಂದು ಮದ್ಯಾಹ್ನ 2ಗಂಟೆಗೆ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿಯವರು ಈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಐ.ಪಿ. ಗಡದ್, ವಲಯಾಧಿಕಾರಿ ಡಾ ಪ್ರಶಾಂತ್ ಭಟ್, ಧನಸಹಾಯ ಮಾಡಿದ ಜೆನಿಸಿಸ್ ಪ್ಯಾಕೇಜಿಂಗ್ ಪ್ರೈ ಲಿ ನ ಮಾಲಕ ಕೌಶಲ್ ವೋರಾ, ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ,ಎಂಡೋ ಸಲ್ಫಾನ್ ಸಂತ್ರಸ್ತ ರ ಬೇಡಿಕೆಗಳಿಗಾಗಿ ಶ್ರಮಿಸುತ್ತಿರುವ ಡಾ ರವೀಂದ್ರ ನಾಥ್ ಶಾನುಭಾಗ್, ಎಂಸಿಎಚ್ ಪಿಯ ಡೀನ್ ಡಾ ಅರುಣ್ ಮಯ್ಯ, ಶ್ರೀ ರಾಜೇಶ್ ನಾವಡ, ಡಾ ಪಿ.ವಿ. ಭಂಡಾರಿ ಇನ್ನಿತರರು ಇರುತ್ತಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುವ ಯೋಜನೆಯಿದೆ, ಎಂಡೋ ಸಲ್ಫಾನ್ ಸಂತ್ರಸ್ಥರಲ್ಲದೆ ಫಿಸಿಯೋಥೆರಪಿ ಅಗತ್ಯ ಇರುವ ಸುತ್ತ ಮುತ್ತಲಿನ ಪರಿಸರದ ಜನ ಈ ಸೌಲಭ್ಯ ಗಳನ್ನು ಬೆಳೆಸಿಕೊಳ್ಳುವಂತೆ ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು