8:18 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ‌ಸೌಲಭ್ಯ

20/01/2024, 13:01

ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ‌ಸೌಲಭ್ಯ ಒದಗಿಸಲಾಗಿದೆ.
80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈಗ ನಿಷೇಧವಿದೆ. ಆದರೆ ಆಗ ಸಿಂಪಡಿಸಿದ ಎಂಡೋಸಲ್ಫಾನ್ ನಿಂದ ಆ ಭಾಗದ ಜನರು ನರ ದೌರ್ಬಲ್ಯ, ಮಾಂಸ ಖಂಡಗಳ ಸೆವೆತ, ಬುದ್ದಿ ಮಾಂದ್ಯತೆ, ಬಂಜೆತನ ಇನ್ನಿತ್ಯಾದಿ ಸಮಸ್ಯೆ ಗಳಿಂದ ಬಳಲುತ್ತಿದ್ದಾರೆ. ಎಂಡೋ ಸಲ್ಫಾನ್ ಪೀಡಿತರ ಹಲವು ಬೇಡಿಕೆಗಳಲ್ಲಿ ಉತ್ತಮ ಫಿಸಿಯೋಥೆರಪಿ ‌ಸೌಲಭ್ಯ ಕೂಡ ಒಂದು. ಅದು ಮನೆಗೆ ಹತ್ತಿರವಿದ್ದರೆ ಒಳಿತು. ಎಂಡೋ ಸಲ್ಫಾನ್ ಪೀಡಿತರಿಗೆ ಆರೋಗ್ಯ ಚಿಕಿತ್ಸೆ ಶಿಬಿರ ನಡೆಸಿದ ಒನ್ ಗುಡ್ ಸ್ಟೆಪ್ ಸಂಸ್ಥೆಯು ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ, ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಕಟ್ಟಡದಲ್ಲಿ ಸುಸಜ್ಜಿತ ಆಧುನಿಕ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುತ್ತಿದೆ. ದಿನಾಂಕ ಜನವರಿ ೨೦ ರಂದು ಮದ್ಯಾಹ್ನ 2ಗಂಟೆಗೆ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿಯವರು ಈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಐ.ಪಿ. ಗಡದ್, ವಲಯಾಧಿಕಾರಿ ಡಾ ಪ್ರಶಾಂತ್ ಭಟ್, ಧನಸಹಾಯ ಮಾಡಿದ ಜೆನಿಸಿಸ್ ಪ್ಯಾಕೇಜಿಂಗ್ ಪ್ರೈ ಲಿ ನ ಮಾಲಕ ಕೌಶಲ್ ವೋರಾ, ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ,ಎಂಡೋ ಸಲ್ಫಾನ್ ಸಂತ್ರಸ್ತ ರ ಬೇಡಿಕೆಗಳಿಗಾಗಿ ಶ್ರಮಿಸುತ್ತಿರುವ ಡಾ ರವೀಂದ್ರ ನಾಥ್ ಶಾನುಭಾಗ್, ಎಂಸಿಎಚ್ ಪಿಯ ಡೀನ್ ಡಾ ಅರುಣ್ ಮಯ್ಯ, ಶ್ರೀ ರಾಜೇಶ್ ನಾವಡ, ಡಾ ಪಿ.ವಿ. ಭಂಡಾರಿ ಇನ್ನಿತರರು ಇರುತ್ತಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಪಿ ಸೌಲಭ್ಯಗಳನ್ನು ಪ್ರಾರಂಭಿಸುವ ಯೋಜನೆಯಿದೆ, ಎಂಡೋ ಸಲ್ಫಾನ್ ಸಂತ್ರಸ್ಥರಲ್ಲದೆ ಫಿಸಿಯೋಥೆರಪಿ ಅಗತ್ಯ ಇರುವ ಸುತ್ತ ಮುತ್ತಲಿನ ಪರಿಸರದ ಜನ ಈ ಸೌಲಭ್ಯ ಗಳನ್ನು ಬೆಳೆಸಿಕೊಳ್ಳುವಂತೆ ಒನ್ ಗುಡ್ ಸ್ಟೆಪ್ ಸಂಸ್ಥೆಯ ನಿರ್ದೇಶಕಿ ಅಮಿತಾ ಪೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು