5:15 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರೋಹನ್ ಕ್ರಿಯೇಟರ್ಸ್ ಮೀಟ್ 2024: ಮಂಗಳೂರಿನ ಕಂಟೆಂಟ್ ರಚನಾಕಾರರ ಒಕ್ಕೂಟ ರಚನೆ

20/01/2024, 19:20

ಮಂಗಳೂರು(reporterkarnataka.com): ರೋಹನ್ ಕಾರ್ಪೊರೇಷನ್, ಮಂಗಳೂರಿನ ಸ್ಫೂರ್ತಿದಾಯಕ ಕಂಟೆಂಟ್ ರಚನಕಾರರನ್ನು ರೋಹನ್ ಕ್ರಿಯೇಟರ್ಸ್ ಮೀಟ್ 2024ರ ಸಲುವಾಗಿ ಒಂದೇ ಸೂರಿನಡಿ ಶನಿವಾರ ನಗರದಲ್ಲಿ ಒಗ್ಗೂಡಿಸಿತು.
ಎ.ಜೆ. ಗ್ರ್ಯಾಂಡ್ ಹೋಟೆಲ್‌ನಲ್ಲಿ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಕಂಟೆಂಟ್ ರಚನಕಾರರು, ಬ್ಲಾಗರ್‌ಗಳು, ಛಾಯಾಗ್ರಾಹಕರು, ವಿಡಿಯೋಗ್ರಾಹಕರು, ಸಂಗೀತಕಾರರು ಮತ್ತು ಇತರರು ನೆಟ್‌ವರ್ಕ್, ಪರಿಣತಿ ಮತ್ತು ಸೃಜನಶೀಲತೆಯನ್ನು ಉತ್ತೇಜಿ
ಸಲು ಒಂದೇ ಸೂರಿನಡಿ ಸೇರಿದ್ದರು.
ಶರಣ್ ಚಿಲಿಂಬಿ, ಪ್ರಜ್ವಲ್ ಶೆಟ್ಟಿ, ಮೋಕ್ಷಿತ್ ಪೂಜಾರಿ, ಸಾಹಿಲ್ ರೈ, ಹೇರಾ ಪಿಂಟೊ, ಮಂಗಳೂರು ಮೇರಿ ಜಾನ್, ಸೌಜನ್ಯಾ ಹೆಗ್ಡೆ ಮತ್ತು ಸಾಮಾಜಿಕ ಮಾಧ್ಯಮದ ಭೂಪಟಲದಲ್ಲಿನ ಇತರ ಹಲವಾರು ಪ್ರಮುಖ ವ್ಯಕ್ತಿಗಳ ಭಾಗವಹಿಸುವಿಕೆಯು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಮೌಲ್ಯವನ್ನು ನೀಡಿತು.

ಇಂದಿನ ಕ್ರಿಯೇಟಿವ್ ಕಂಟೆಂಟ್ ತಯಾರಕರು ಧಾರಣೆಗಳನ್ನು ರೂಪಿಸುವ ಮತ್ತು ಮಂಗಳೂರನ್ನು ಒಂದು ಯಶಸ್ವಿ ಬ್ರ್ಯಾಂಡ್ ಎಂದು ಉತ್ತೇಜಿಸುವಲ್ಲಿ ಗಮನಾರ್ಹವಾದ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಮಂಗಳೂರು ಪ್ರದೇಶದ ದೃಷ್ಟಿಕೋನದೊಂದಿಗೆ ಹೊಂದಿಕೊಳ್ಳುವ ಯಾವುದೇ ಭರವಸೆಯ ಕಲ್ಪನೆಗಳಿಗೆ ರೋಹನ್ ಕಾರ್ಪೊರೇಷನ್ ಸಹಕರಿಸಲು ಮತ್ತು ಬೆಂಬಲಿಸಲು ಉತ್ಸುಕವಾಗಿದೆ ಎಂದು ರೋಹನ್ ಕಾರ್ಪೋರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ಹೇಳಿದರು.
ಚರ್ಚೆಗಳು, ಆಕರ್ಷಕ ಚಟುವಟಿಕೆಗಳು ಮತ್ತು ಮೌಲ್ಯಯುತ ನೆಟ್‌ವರ್ಕಿಂಗ್ ಅವಕಾಶಗಳ ಈ ಕಾರ್ಯಕ್ರಮವು ರಚನಕಾರರು ಮತ್ತು ಭಾಗವಹಿಸುವವರ ಮೆಚ್ಚುಗೆಯನ್ನು ಪಡೆಯಿತು. ರೋಹನ್ ಕ್ರಿಯೇಟರ್ಸ್ ಮೀಟ್ 2024 – ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಕಾರ್ಪೊರೇಟ್ ಘಟಕಗಳ ನಡುವಿನ ಸಹಕಾರಕ್ಕೆ ಅವಕಾಶವನ್ನು ಒದಗಿಸಿತು ಹಾಗೂ ಮಂಗಳೂರನ್ನು ವಿಶಿಷ್ಟವಾದ ಬ್ರ‍್ಯಾಂಡ್ ಎಂದು ಉತ್ತೇಜಿಸುವ ಸೃಜನಶೀಲ ವಾತಾವರಣವನ್ನು ಬೆಳೆಸಿತು.

ಇತ್ತೀಚಿನ ಸುದ್ದಿ

ಜಾಹೀರಾತು