12:28 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಶಿಷ್ಟಾಚಾರ ಬದಿಗೊತ್ತಿ ಗೇಟಿನಡಿ ನುಸುಳಿದ ಸ್ಫೀಕರ್ ಖಾದರ್!!: ಜನರ ಬವಣೆ ಸ್ವಂತ ಅನುಭವಕ್ಕೆ!

20/01/2024, 21:03

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದ ಎರಡನೇ ಅತ್ಯುನ್ನತ ಸ್ಥಾನವಾದ ವಿಧಾನ ಸಭೆ ಸ್ಫೀಕರ್ ಸ್ಥಾನವನ್ನು ಅಲಂಕರಿಸಿರುವ ಯು.ಟಿ. ಖಾದರ್ ಅವರು ತನ್ನೆಲ್ಲ ಶಿಷ್ಟಾಚಾರವನ್ನು ಬದಿಗೊತ್ತಿ ಜನಸಾಮಾನ್ಯರ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದ ಪ್ರಸಂಗ ಅವರ ಸ್ವಕ್ಷೇತ್ರದಲ್ಲಿ ಶನಿವಾರ ನಡೆಯಿತು.



ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಿಂದ ತೊಕ್ಕೊಟ್ಟು ಒಳಪೇಟೆಗೆ ಹೋಗುವ ಅಡ್ಡರಸ್ತೆಯನ್ನು ಅನೇಕ ವರ್ಷಗಳಿಂದ ಜನರು ಕಾಲುದಾರಿಯಾಗಿ ಉಪಯೋಗಿಸುತ್ತಿದ್ದರು. ರೈಲ್ವೆ ಟ್ರ್ಯಾಕ್ ನಿಂದಾಗಿ ಈ ರಸ್ತೆಯ ನ್ನು ಬಳಸಬೇಕಿತ್ತು. ಆದರೆ ಮೊನ್ನೆ ಮೊನ್ನೆ ಯಾವುದೇ ಸೂಚನೆ ನೀಡದೆ ರೈಲ್ವೆ ಇಲಾಖೆಯಿಂದ ಈ ದಾರಿಯನ್ನು ಮುಚ್ಚಲಾಗಿದೆ. ಇಲ್ಲೊಂದು ಕಬ್ಬಿಣದ ಸಲಾಕೆಗಳನ್ನು ಬಳಸಿ ಗೇಟ್ ಅಳವಡಿಸಲಾಗಿದೆ. ಗೇಟಿ ಅಡಿಯಿಂದ ಜನರು ಶ್ವಾನ ತರಹ ತೂರಿಕೊಂಡು ಆ ಕಡೆಯಿಂದ ಈ ಕಡೆಗೆ ಬರಬೇಕು. ಮಹಿಳೆಯರಿಗೆ ಹಾಗೂ ಕೈಯಲ್ಲಿ ಸಾಮಾಗ್ರಿಗಳನ್ನು ಹಿಡಿದುಕೊಂಡು ಹೋಗುವವರಿಗೆ ಗೇಟಿನಡಿಯಿಂದ ತೂರಲು ಸಾಧ್ಯವೇ ಇಲ್ಲ. ಈ ಕುರಿತು ಸಾರ್ವಜನಿಕರು ಜಿಲ್ಲಾಧಿಕಾರಿಯವರಿಗೆ ದೂರು ಕೂಡ ನೀಡಿ ರಸ್ತೆ ತೆರವಿಗೆ ಮನವಿ ಮಾಡಿದ್ದರು. ವಿಷಯ ಅರಿತ ಸ್ಪೀಕರ್ ಖಾದರ್ ಅವರು ಸ್ವತಃ ತಾನೇ ಫೀಲ್ಡಿಗಿಳಿದರು. ಗೇಟು ಅಳವಡಿಸಿದ ಜಾಗಕ್ಕೆ ಬಂದರು. ಜನಸಾಮಾನ್ಯರು ಗೇಟಿನಡಿ ತೂರಿದ ಹಾಗೆ ತಾನು ಕೂಡ ತೂರಿ ಈ ಕಡೆ ಬಂದು ಜನರು ಪಡುವ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದರು. ಈ ಕುರಿತು ಸಭೆ ಕರೆದು ಕ್ರಮ ಕೈಗೊಳ್ಳಲು ಸ್ಫೀಕರ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು