5:58 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಶಿಷ್ಟಾಚಾರ ಬದಿಗೊತ್ತಿ ಗೇಟಿನಡಿ ನುಸುಳಿದ ಸ್ಫೀಕರ್ ಖಾದರ್!!: ಜನರ ಬವಣೆ ಸ್ವಂತ ಅನುಭವಕ್ಕೆ!

20/01/2024, 21:03

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದ ಎರಡನೇ ಅತ್ಯುನ್ನತ ಸ್ಥಾನವಾದ ವಿಧಾನ ಸಭೆ ಸ್ಫೀಕರ್ ಸ್ಥಾನವನ್ನು ಅಲಂಕರಿಸಿರುವ ಯು.ಟಿ. ಖಾದರ್ ಅವರು ತನ್ನೆಲ್ಲ ಶಿಷ್ಟಾಚಾರವನ್ನು ಬದಿಗೊತ್ತಿ ಜನಸಾಮಾನ್ಯರ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದ ಪ್ರಸಂಗ ಅವರ ಸ್ವಕ್ಷೇತ್ರದಲ್ಲಿ ಶನಿವಾರ ನಡೆಯಿತು.



ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಿಂದ ತೊಕ್ಕೊಟ್ಟು ಒಳಪೇಟೆಗೆ ಹೋಗುವ ಅಡ್ಡರಸ್ತೆಯನ್ನು ಅನೇಕ ವರ್ಷಗಳಿಂದ ಜನರು ಕಾಲುದಾರಿಯಾಗಿ ಉಪಯೋಗಿಸುತ್ತಿದ್ದರು. ರೈಲ್ವೆ ಟ್ರ್ಯಾಕ್ ನಿಂದಾಗಿ ಈ ರಸ್ತೆಯ ನ್ನು ಬಳಸಬೇಕಿತ್ತು. ಆದರೆ ಮೊನ್ನೆ ಮೊನ್ನೆ ಯಾವುದೇ ಸೂಚನೆ ನೀಡದೆ ರೈಲ್ವೆ ಇಲಾಖೆಯಿಂದ ಈ ದಾರಿಯನ್ನು ಮುಚ್ಚಲಾಗಿದೆ. ಇಲ್ಲೊಂದು ಕಬ್ಬಿಣದ ಸಲಾಕೆಗಳನ್ನು ಬಳಸಿ ಗೇಟ್ ಅಳವಡಿಸಲಾಗಿದೆ. ಗೇಟಿ ಅಡಿಯಿಂದ ಜನರು ಶ್ವಾನ ತರಹ ತೂರಿಕೊಂಡು ಆ ಕಡೆಯಿಂದ ಈ ಕಡೆಗೆ ಬರಬೇಕು. ಮಹಿಳೆಯರಿಗೆ ಹಾಗೂ ಕೈಯಲ್ಲಿ ಸಾಮಾಗ್ರಿಗಳನ್ನು ಹಿಡಿದುಕೊಂಡು ಹೋಗುವವರಿಗೆ ಗೇಟಿನಡಿಯಿಂದ ತೂರಲು ಸಾಧ್ಯವೇ ಇಲ್ಲ. ಈ ಕುರಿತು ಸಾರ್ವಜನಿಕರು ಜಿಲ್ಲಾಧಿಕಾರಿಯವರಿಗೆ ದೂರು ಕೂಡ ನೀಡಿ ರಸ್ತೆ ತೆರವಿಗೆ ಮನವಿ ಮಾಡಿದ್ದರು. ವಿಷಯ ಅರಿತ ಸ್ಪೀಕರ್ ಖಾದರ್ ಅವರು ಸ್ವತಃ ತಾನೇ ಫೀಲ್ಡಿಗಿಳಿದರು. ಗೇಟು ಅಳವಡಿಸಿದ ಜಾಗಕ್ಕೆ ಬಂದರು. ಜನಸಾಮಾನ್ಯರು ಗೇಟಿನಡಿ ತೂರಿದ ಹಾಗೆ ತಾನು ಕೂಡ ತೂರಿ ಈ ಕಡೆ ಬಂದು ಜನರು ಪಡುವ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದರು. ಈ ಕುರಿತು ಸಭೆ ಕರೆದು ಕ್ರಮ ಕೈಗೊಳ್ಳಲು ಸ್ಫೀಕರ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು