3:20 AM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಶಿಷ್ಟಾಚಾರ ಬದಿಗೊತ್ತಿ ಗೇಟಿನಡಿ ನುಸುಳಿದ ಸ್ಫೀಕರ್ ಖಾದರ್!!: ಜನರ ಬವಣೆ ಸ್ವಂತ ಅನುಭವಕ್ಕೆ!

20/01/2024, 21:03

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದ ಎರಡನೇ ಅತ್ಯುನ್ನತ ಸ್ಥಾನವಾದ ವಿಧಾನ ಸಭೆ ಸ್ಫೀಕರ್ ಸ್ಥಾನವನ್ನು ಅಲಂಕರಿಸಿರುವ ಯು.ಟಿ. ಖಾದರ್ ಅವರು ತನ್ನೆಲ್ಲ ಶಿಷ್ಟಾಚಾರವನ್ನು ಬದಿಗೊತ್ತಿ ಜನಸಾಮಾನ್ಯರ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದ ಪ್ರಸಂಗ ಅವರ ಸ್ವಕ್ಷೇತ್ರದಲ್ಲಿ ಶನಿವಾರ ನಡೆಯಿತು.



ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಿಂದ ತೊಕ್ಕೊಟ್ಟು ಒಳಪೇಟೆಗೆ ಹೋಗುವ ಅಡ್ಡರಸ್ತೆಯನ್ನು ಅನೇಕ ವರ್ಷಗಳಿಂದ ಜನರು ಕಾಲುದಾರಿಯಾಗಿ ಉಪಯೋಗಿಸುತ್ತಿದ್ದರು. ರೈಲ್ವೆ ಟ್ರ್ಯಾಕ್ ನಿಂದಾಗಿ ಈ ರಸ್ತೆಯ ನ್ನು ಬಳಸಬೇಕಿತ್ತು. ಆದರೆ ಮೊನ್ನೆ ಮೊನ್ನೆ ಯಾವುದೇ ಸೂಚನೆ ನೀಡದೆ ರೈಲ್ವೆ ಇಲಾಖೆಯಿಂದ ಈ ದಾರಿಯನ್ನು ಮುಚ್ಚಲಾಗಿದೆ. ಇಲ್ಲೊಂದು ಕಬ್ಬಿಣದ ಸಲಾಕೆಗಳನ್ನು ಬಳಸಿ ಗೇಟ್ ಅಳವಡಿಸಲಾಗಿದೆ. ಗೇಟಿ ಅಡಿಯಿಂದ ಜನರು ಶ್ವಾನ ತರಹ ತೂರಿಕೊಂಡು ಆ ಕಡೆಯಿಂದ ಈ ಕಡೆಗೆ ಬರಬೇಕು. ಮಹಿಳೆಯರಿಗೆ ಹಾಗೂ ಕೈಯಲ್ಲಿ ಸಾಮಾಗ್ರಿಗಳನ್ನು ಹಿಡಿದುಕೊಂಡು ಹೋಗುವವರಿಗೆ ಗೇಟಿನಡಿಯಿಂದ ತೂರಲು ಸಾಧ್ಯವೇ ಇಲ್ಲ. ಈ ಕುರಿತು ಸಾರ್ವಜನಿಕರು ಜಿಲ್ಲಾಧಿಕಾರಿಯವರಿಗೆ ದೂರು ಕೂಡ ನೀಡಿ ರಸ್ತೆ ತೆರವಿಗೆ ಮನವಿ ಮಾಡಿದ್ದರು. ವಿಷಯ ಅರಿತ ಸ್ಪೀಕರ್ ಖಾದರ್ ಅವರು ಸ್ವತಃ ತಾನೇ ಫೀಲ್ಡಿಗಿಳಿದರು. ಗೇಟು ಅಳವಡಿಸಿದ ಜಾಗಕ್ಕೆ ಬಂದರು. ಜನಸಾಮಾನ್ಯರು ಗೇಟಿನಡಿ ತೂರಿದ ಹಾಗೆ ತಾನು ಕೂಡ ತೂರಿ ಈ ಕಡೆ ಬಂದು ಜನರು ಪಡುವ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದರು. ಈ ಕುರಿತು ಸಭೆ ಕರೆದು ಕ್ರಮ ಕೈಗೊಳ್ಳಲು ಸ್ಫೀಕರ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು