8:19 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ರಾಮ ಸೇತುವೆ ನಿರ್ಮಿಸಿದ ಧನುಷ್ಕೋಡಿಗೆ ಪ್ರಧಾನಿ ಮೋದಿ ಭೇಟಿ: ಕೋತಂಡರಾಮ ಸ್ವಾಮಿಗೆ ಪೂಜೆ ಸಲ್ಲಿಕೆ

21/01/2024, 12:17

ಧನುಷ್ಕೋಡಿ(reporterkarnataka.com): ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುನ್ನ ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿ ಬಳಿ ರಾಮಸೇತು ನಿರ್ಮಿಸಿದ ಸ್ಥಳವಾದ ಅರಿಚಲ್ ಮುನೈಗೆ ಭೇಟಿ ನೀಡಿದರು.


ಅರಿಚಲ್ ಮುನೈ ಪಾಯಿಂಟ್‌ನಲ್ಲಿ ಮೋದಿಯವರು ಬೈನಾಕ್ಯುಲರ್ ಮೂಲಕ ಸಮುದ್ರ ವೀಕ್ಷಿಸಿದರು.
ರಾವಣನನ್ನು ಸೋಲಿಸಲು ಭಗವಾನ್ ರಾಮನು ಪ್ರತಿಜ್ಞೆ ಮಾಡಿದ ಸ್ಥಳ ಧನುಷ್ಕೋಡಿ ಎಂದು ಪುರಾಣದ ಮೂಲಕ ನಂಬಲಾಗಿದೆ. ಶ್ರೀರಾಮನು ಲಂಕೆಗೆ ತೆರಳಿದ ಪುಣ್ಯಭೂಮಿ ಇದಾಗಿದೆ ಎಂಬ ನಂಬಿಕೆ ಇದೆ.
ಶ್ರೀ ಕೋತಂಡರಾಮ ಸ್ವಾಮಿ ದೇವಸ್ಥಾನದಲ್ಲೂ ಪ್ರಧಾನಿ ಮೋದಿ ಪೂಜೆ ಸಲ್ಲಿಸಲಿದರು. ಕೋದಂಡರಾಮ ಎಂದರೆ ಬಿಲ್ಲು ಹೊಂದಿರುವ ರಾಮ ಎಂದರ್ಥ. ಇದು ಧನುಷ್ಕೋಡಿಯಲ್ಲಿದೆ. ರಾವಣನ ಸಹೋದರ ವಿಭೀಷಣನು ಮೊದಲು ಭಗವಾನ್ ರಾಮನನ್ನು ಭೇಟಿಯಾಗಿ ಆಶ್ರಯವನ್ನು ಕೇಳಿದ್ದು ಇಲ್ಲಿಯೇ ಎಂದು ಹೇಳಲಾಗುತ್ತದೆ. ಶ್ರೀರಾಮನು ವಿಭೀಷಣನ ಪಟ್ಟಾಭಿಷೇಕವನ್ನು ನಡೆಸಿದ ಸ್ಥಳವಾಗಿದೆ ಎಂದು ಕೆಲವು ದಂತಕಥೆಗಳು ಹೇಳುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು