3:58 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ರಾಮ ಭಕ್ತನೆಂದು ಹೇಳುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡಲಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

21/01/2024, 18:37

ಮಂಗಳೂರು(reporterkarnataka.com): ತಾನು ರಾಮ ಭಕ್ತನೆಂದು ಹೇಳುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡುವ ಮೂಲಕ ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಕುಟುಂಬ ಸಮೇತ ಸಂಭ್ರಮ,ಪೂಜೆ ಆಚರಿಸಲು ಅವಕಾಶ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.
ಶ್ರೀರಾಮನ ಆದರ್ಶ ಬೋಧಿಸುವ ಶಿಕ್ಷಣ ಇಲಾಖೆಯು ಶ್ರೀರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಟೆ ಸಂದರ್ಭ ಮಕ್ಕಳು ಕುಟುಂಬ ಸಮೇತ ಪೂಜೆ, ಸಂಭ್ರಮವನ್ನು ಆಚರಿಸಲು ಸೋಮವಾರ ರಾಜ್ಯ ಶಿಕ್ಷಣ ಇಲಾಖೆ ರಜೆ ಸಾರಿಲ್ಲ. ಈ ಮೂಲಕ ಮೂಲಕ ಶಿಕ್ಷಣ ಇಲಾಖೆ ಶ್ರೀರಾಮನ ಆದರ್ಶ ಬೋಧಿಸುವ ನೈತಿಕತೆ ಕಳೆದುಕೊಳ್ಳುತ್ತಿದೆ.
ಮಾತ್ರವಲ್ಲ ಬಹುಸಂಖ್ಯಾತ ಜನರ ಮನಸ್ಸಿಗೆ ಘಾಸಿ ಉಂಟು ಮಾಡುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಡೀ ದೇಶದಲ್ಲಿ ಹಬ್ಬದ ಸಂಭ್ರಮವಿದೆ. ಮನೆ ಮನೆಯಲ್ಲೂ ದೀಪಾವಳಿ ಅಚರಣೆಗೆ ತಯಾರಿ ನಡೆದಿದೆ. ಶಿಕ್ಷಣ ಇಲಾಖೆ ಮಾತ್ರ ಈ ಸಂಭ್ರಮದಲ್ಲಿ ಮಕ್ಕಳು ಭಾಗವಹಿಸದಂತೆ ರಜೆ ಸಾರದೆ ಪರೋಕ್ಷವಾಗಿ ತಡೆ ಒಡ್ಡಿದೆ.
ಕೆಲವು ಖಾಸಗೀ ಹಾಗೂ ಸರಕಾರಿ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಪರೀಕ್ಷೆ ನಡೆಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಇಂತಹ ಹಿಂದೂ ವಿರೋಧಿ ಭಾವನೆಯನ್ನು ಮಕ್ಕಳಲ್ಲಿ ಬೆಳೆಯಲು ಅವಕಾಶ ನೀಡದೆ ಹಿಂದೂಗಳ ಮನವಿಯನ್ನು ಪರಿಗಣಿಸಿ , ಸರಕಾರ ತತ್ ಕ್ಷಣ ರಜೆ ನೀಡಲು ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಬಹುಸಂಖ್ಯಾತರ ಅದರ್ಶ ಪುರುಷ ಶ್ರೀರಾಮನ ಮಂದಿರವು 500 ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಅಸ್ಥಿತ್ವಕ್ಕೆ ಬರುತ್ತಿದೆ. ನಮ್ಮ ಪೀಳಿಗೆಗೆ
ಇದನ್ನು ವೀಕ್ಷಿಸಲು ಸಿಕ್ಕಿರುವುದು ಪುಣ್ಯವೆಂದೇ ಭಾವಿಸಿದ್ದೇವೆ. ಈ ಭಾಗ್ಯದಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡಿ ಶಿಕ್ಷಣ ಇಲಾಖೆ ಯಾವ ಸಾಧನೆ ಮಾಡಲು ಹೊರಟಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು