5:43 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಮುಲ್ಕಿ: ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ: 29 ಮಂದಿ ಬಂಧನ, 1.75 ಲಕ್ಷ ರೂ. ನಗದು, ಸೊತ್ತು ವಶ

21/01/2024, 19:46

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ಮುಲ್ಕಿ ಸಮೀಪ
ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟವಾಡುತ್ತಿದ್ದ 29 ಜನರ ಬಂಧಿಸಿದ್ದಾರೆ.
ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜೂಜಾಟ ಆಡುತ್ತಿದ್ದಾರೆಂದು ಖಚಿತ ಮಾಹಿತಿ ಮೇರೆಗೆ ಬೆಳಗಿನ ಜಾವ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಎಂಬ ಅದೃಷ್ಟದ ಜೂಜಾಟವನ್ನು ಆಡುತ್ತಿದ್ದರು. ಆರೋಪಿಗಳಿಂದ 1,75,450/- ರೂ ನಗದು ಹಣ ಹಾಗೂ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂಜಾಟವನ್ನು ನಿತ್ಯಾನಂದ , ವಿಲ್ಫ್ರೇಡ್ ಮತ್ತು ರೆಹಮಾನ್ ಎಂಬವರು ತಮ್ಮ ಲಾಭಕ್ಕೋಸ್ಕರ ಆಡಿಸುತ್ತಿದ್ದರು. ನಿತ್ಯಾನಂದ ಮತ್ತು ರೆಹಮಾನ್ ಓಡಿ ಹೋಗಿ ತಪ್ಪಿಸಿಕೊಂಡಿರುತ್ತಾರೆ. ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಅವರ ತಂಡ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು