2:54 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ

08/08/2021, 13:35

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು.

ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅವಧಿಯಲ್ಲಿ ಎಷ್ಟು ಸಾಧ್ಯವಾಗುತ್ತೋ ಅಷ್ಟು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ  ಶಾಸಕ ಬಸವನಗೌಡ ತುರುವಿಹಾಳ ಹೇಳಿದರು.

ಬ್ಲಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಕಾಂಗ್ರೆಸ್ ಮುಖಂಡರಾದ ಸಿದ್ದಣ್ಣ ಹೂವಿನಭಾವಿ, ಹನುಮಂತಪ್ಪ ಮುದ್ದಾಪೂರು, ಎಚ್. ಬಿ. ಮುರಾರಿ, ಮೈಬುಸಾಬ ಮುದ್ದಾಪೂರು ಹಾಗೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಂಜಿನಿಯರಿಂಗ್ ಇಲಾಖೆ 2020-21ನೇ ಸಾಲಿನ ಬಿ ಆರ್ ಜಿ ಎಫ್ ಯೋಜನೆಡಿಯಲ್ಲಿ ಮಸ್ಕಿ ಲಿಂಗಸಗೂರು ಎನ್ ಎಚ್ 150ಎ ರಸ್ತೆಯಿಂದ ಮಾರಲದಿನ್ನಿವರೆಗೆ ರಸ್ತೆ ಕಾಮಗಾರಿ ಭೂಮಿ ಪೂಜೆಗೆ ಬಸನಗೌಡ ತುರವಿಹಾಳ ಚಾಲನೆ ನೀಡಿದರು. ಮಧ್ಯಾಹ್ನ ಗಚ್ಚಿನ ಹಿರೇಮಠದ ಕಲ್ಯಾಣ ಮಂಟಪದಲ್ಲಿ ನೌಕರರ ಸಂಘದ ಮತ್ತು ಶಿಕ್ಷಕರ ಸಂಘ ಸ್ಕೌಟ್ ಅಂಡ್ ಗೈಡ್ಸ್ ವತಿಯಿಂದ ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮೂರು ಸಂಘದ ವತಿಯಿಂದ ಶಾಸಕರಿಗೆ ಸನ್ಮಾನ ಮಾಡಲಾಯಿತು. ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಸ್ವಾಮಿ ಶಿಕ್ಷಕ ಹಂಪನಾಳ,

ಶಿಕ್ಷಕರ ಮತ್ತು ಅವರ ಬೇಡಿಕೆಗಳು ಈಡೇರಿಸಬೇಕು ಮತ್ತು  ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ಮಸ್ಕಿ ಕಾಯಂಗೊಳಿಸಬೇಕು. ಲಿಂಗಸ್ಗೂರು ಮಾನ್ವಿ ಸಿಂಧನೂರ್ ಸಂಪನ್ಮೂಲ ಶಿಕ್ಷಣ ಕೇಂದ್ರ ಕಿರಲ್ ಆಗುವುದರಿಂದ ಶಿಕ್ಷಕರ ಬಹಳ ತೊಂದರೆಯಾಗುತ್ತಿದ್ದು, ಆದ ಕಾರಣ ಮಸ್ಕಿ ಕ್ಷೇತ್ರಕ್ಕೆ ಸಂಬಂಧಪಡುವ ಸಂಪನ್ಮೂಲ ಕಲ್ಪಿಸಿಕೊಡಬೇಕು. 

ಸರಕಾರಿ ನೌಕರರ ಸಮಸ್ಯೆಯ 
ಪರಿಹರಿಸಬೇಕು, ಹಳೆ ಶಾಲಾ ಕಟ್ಟಡಗಳು ನಿರ್ಮಾಣ ಹಂತದಲ್ಲಿರುವ ಶಾಲಾ ಕಟ್ಟಡಗಳ ಪೂರ್ಣಗೊಳಿಸಬೇಕು, ಶಿಕ್ಷಕರಿಗೆ ಸಂಬಂಧ ಎಲ್ಲಾ ಸಮಸ್ಯೆ ಪರಿಹರಿಸಬೇಕು, ಮಸ್ಕಿ ತಾಲೂಕ್ ಆಗಿ ಮೂರು ವರ್ಷ ಗತಿಸಿದರು ಮಸ್ಕಿಯಲ್ಲಿ ಸುಮಾರು 48 ಸರಕಾರಿ ಕಚೇರಿಗಳು ಮಸ್ಕಿಯಲ್ಲಿ ಆದರೆ ಹೆಸರಿಗಷ್ಟೇ 4 ಅಥವಾ 5 ಸರಕಾರಿ ಕಚೇರಿಗಳು ಪ್ರಾರಂಭವಾಗಿವೆ, ಮಿಕ್ಕದನ್ನು ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿದರು.

ಪುರಸಭೆ ಮುಖ್ಯ ಅಧಿಕಾರಿ, ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು