8:17 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ

22/01/2024, 13:46

ಭೀಮಣ್ಣ ಪೂಜಾರಿ ಶಿರನಾಳ ಮೈಸೂರು

info.reporterkarnataka@gmail.com

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು.


ಮೈಸೂರಿನ‌ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗುಜ್ಜೇಗೌಡನಪುರ ಗ್ರಾಮದ ವ್ಯಾಪ್ತಿಯಲ್ಲಿ ಹಾರೋಹಳ್ಳಿ ಪ್ರದೇಶವಿದೆ. ಈ ಹಾರೋಹಳ್ಳಿ ಪ್ರದೇಶದ ಎಚ್. ರಾಮದಾಸ ಎಂಬ ಸಾಮಾನ್ಯ ರೈತನ ಜಮೀನಿನಲ್ಲಿ ದೊರೆತ ಶಿಲೆಯಿಂದ ರಾಮಲಲ್ಲಾನ ವಿಗ್ರಹ ಮೂಡಿ ಬಂದಿದೆ. ವ್ಯವಸಾಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾಮದಾಸ ಅವರು ತನ್ನ ಜಮೀನಿನಿಂದ ಈ‌ ಶಿಲೆಯನ್ನು ತೆಗೆಸಿದ್ದರು. ಇಂದು ಆ ಶಿಲೆ ಇಡೀ ಜಗತ್ತೇ ನೋಡಬಲ್ಲ ರಾಮಲಲ್ಲಾನಾಗಿ ಎದ್ದು ನಿಂತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ವೇಳೆಯಲ್ಲಿ ಇಲ್ಲಿ ಭೂಮಿ ಪೂಜೆ ನಡೆಸಲಾಗಿದೆ. ಇಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಸಂಕಲ್ಪವನ್ನು ರಾಮದಾಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು