11:45 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ

22/01/2024, 13:46

ಭೀಮಣ್ಣ ಪೂಜಾರಿ ಶಿರನಾಳ ಮೈಸೂರು

info.reporterkarnataka@gmail.com

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು.


ಮೈಸೂರಿನ‌ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗುಜ್ಜೇಗೌಡನಪುರ ಗ್ರಾಮದ ವ್ಯಾಪ್ತಿಯಲ್ಲಿ ಹಾರೋಹಳ್ಳಿ ಪ್ರದೇಶವಿದೆ. ಈ ಹಾರೋಹಳ್ಳಿ ಪ್ರದೇಶದ ಎಚ್. ರಾಮದಾಸ ಎಂಬ ಸಾಮಾನ್ಯ ರೈತನ ಜಮೀನಿನಲ್ಲಿ ದೊರೆತ ಶಿಲೆಯಿಂದ ರಾಮಲಲ್ಲಾನ ವಿಗ್ರಹ ಮೂಡಿ ಬಂದಿದೆ. ವ್ಯವಸಾಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾಮದಾಸ ಅವರು ತನ್ನ ಜಮೀನಿನಿಂದ ಈ‌ ಶಿಲೆಯನ್ನು ತೆಗೆಸಿದ್ದರು. ಇಂದು ಆ ಶಿಲೆ ಇಡೀ ಜಗತ್ತೇ ನೋಡಬಲ್ಲ ರಾಮಲಲ್ಲಾನಾಗಿ ಎದ್ದು ನಿಂತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ವೇಳೆಯಲ್ಲಿ ಇಲ್ಲಿ ಭೂಮಿ ಪೂಜೆ ನಡೆಸಲಾಗಿದೆ. ಇಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಸಂಕಲ್ಪವನ್ನು ರಾಮದಾಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು