10:10 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ

22/01/2024, 13:46

ಭೀಮಣ್ಣ ಪೂಜಾರಿ ಶಿರನಾಳ ಮೈಸೂರು

info.reporterkarnataka@gmail.com

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು.


ಮೈಸೂರಿನ‌ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗುಜ್ಜೇಗೌಡನಪುರ ಗ್ರಾಮದ ವ್ಯಾಪ್ತಿಯಲ್ಲಿ ಹಾರೋಹಳ್ಳಿ ಪ್ರದೇಶವಿದೆ. ಈ ಹಾರೋಹಳ್ಳಿ ಪ್ರದೇಶದ ಎಚ್. ರಾಮದಾಸ ಎಂಬ ಸಾಮಾನ್ಯ ರೈತನ ಜಮೀನಿನಲ್ಲಿ ದೊರೆತ ಶಿಲೆಯಿಂದ ರಾಮಲಲ್ಲಾನ ವಿಗ್ರಹ ಮೂಡಿ ಬಂದಿದೆ. ವ್ಯವಸಾಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾಮದಾಸ ಅವರು ತನ್ನ ಜಮೀನಿನಿಂದ ಈ‌ ಶಿಲೆಯನ್ನು ತೆಗೆಸಿದ್ದರು. ಇಂದು ಆ ಶಿಲೆ ಇಡೀ ಜಗತ್ತೇ ನೋಡಬಲ್ಲ ರಾಮಲಲ್ಲಾನಾಗಿ ಎದ್ದು ನಿಂತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ವೇಳೆಯಲ್ಲಿ ಇಲ್ಲಿ ಭೂಮಿ ಪೂಜೆ ನಡೆಸಲಾಗಿದೆ. ಇಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಸಂಕಲ್ಪವನ್ನು ರಾಮದಾಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು