5:29 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ: ಎಲ್ ಇಡಿಯಲ್ಲಿ ರಾಮ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ, ಭಜನೆ, ಅನ್ನಸಂತರ್ಪಣೆ

22/01/2024, 19:43

ಮಂಗಳೂರು(reporterkarnataka.com): ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಎಲ್ ಇಡಿ ಪರದೆಯಲ್ಲಿ ಅಯೋಧ್ಯೆಯ ರಾಮಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಭಕ್ತರು ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ರಾಮಭಕ್ತರು ಉಪಸ್ಥಿತರಿದ್ದು, ನೇರಪ್ರಸಾರವನ್ನು ವೀಕ್ಷಿಸಿದರು.
ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮಾತ್ರವಲ್ಲ ರಸ್ತೆಯಲ್ಲಿ ಸಂಚರಿಸುವ ನಾಗರಿಕರಿಗೆ, ವಾಹನಗಳಲ್ಲಿ‌ ಪ್ರಯಾಣಿಸುವ ಜನರಿಗೂ ಶ್ರೇಯಾ ಸ್ವೀಟ್ಸ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಸ್ಥಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಭಜನೆ ಆರಂಭವಾಗಿತ್ತು. ಅಬಾಲವೃದ್ಧರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿದರು. ಮಧ್ಯಾಹ್ನ ಪೂಜೆಯ ಬಳಿಕ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ದೇವಳದ ಆಡಳಿತ ಮೋಕ್ತೇಸರರು, ಟ್ರಸ್ಟಿಗಳು, ಭಕ್ತರು, ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಪೂಜೆಯ ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು