10:13 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಾತೃ ಶಕ್ತಿಯಿಂದ ಸ್ವಾಸ್ಥ್ಯ ಸಮೃದ್ಧಿ: ಅಮೃತ ಆರೋಗ್ಯ ಮೇಳದಲ್ಲಿ ಚಿತ್ತರಂಜನ್ ಬೋಳಾರ್

23/01/2024, 18:48

ಮಂಗಳೂರು(reporterkarnataka.com): ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಆಯೋಜಿಸಿದ “ಅಮೃತ ಆರೋಗ್ಯ ಮೇಳ” ವು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಜರುಗಿತು.
ಯೇನಪೋಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಈ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಗಳ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಉದ್ಘಾಟಿಸಿದರು. ಅವರು ಮಾತನಾಡಿ
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಆಶ್ರಮದ ಮಾನವೀಯ ಸೇವಾ ಉಪಕ್ರಮಗಳು, ಉಚಿತ ವೈದ್ಯಕೀಯ ಶಿಬಿರಗಳು ಕಳೆದ 25 ವರ್ಷಗಳಿಂದ ಹೆಚ್ಚಿನ ಪ್ರಚಾರ ಪಡೆಯದೆ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆತ್ಮಶಕ್ತಿ ಹಾಗೂ ಬಿಲ್ಲವ ಸಂಘಗಳ ಹೆಚ್ಚಿನ ಶಿಬಿರಗಳಲ್ಲಿ ಮಠದ ವೈದ್ಯಕೀಯ ತಂಡ ಉಚಿತವಾಗಿ ತಪಾಸಣೆ ನಡೆಸಿ ಔಷಧಗಳನ್ನು ಕೂಡ ಉಚಿತವಾಗಿ ವಿತರಣೆ ಮಾಡಿಕೊಂಡು ಬಂದಿದ್ದಾರೆ. ಇಂತಹ ಉಚಿತ ಶಿಬಿರಗಳು ಜನರು ರೋಗ ಬರುವ ಸಾಕಷ್ಟು ಮುಂಚಿತವಾಗಿ ಕಂಡುಬರುವ ಪೂರ್ವ ಲಕ್ಷಣಗಳನ್ನು ಗುರುತಿಸಿ ರೋಗಬರದಂತೆ ತಡೆಯಲು ಅತ್ಯಂತ ಉಪಯುಕ್ತ ವಿಧಾನವಾಗಿದೆ. ಅಮ್ಮನವರ ಆಶೀರ್ವಾದವನ್ನು ನಡೆಯುವ ಈ ಶಿಬಿರದಲ್ಲಿ ಬಂದಂತ ಎಲ್ಲರಿಗೂ ಆರೋಗ್ಯ ಪೂರ್ಣ ಜೀವನವನ್ನು ನೀಡಿ ಹರಸಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.


ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸುಚಿತ್ರಾ ರಾವ್ ಸ್ವಾಗತಿಸಿದರು. ಡಾ‌ ದೇವದಾಸ್ ಪುತ್ರನ್ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಯೇನಪೋಯ ದಂತ ವೈದ್ಯಕೀಯ ಆಸ್ಪತ್ರೆಯ ಡಾ.ಸುಪ್ರಿಯಾ ಎ., ಸೇವಾ ಸಮಿತಿಯ ಉಪಾದ್ಯಕ್ಷ ಸುರೇಶ್ ಅಮೀನ್, ದಿಲೀಪ್ ಕುಮಾರ್, ರಾಜನ್, ಆಯುಧ್ ನ ಡಾ.ತನುಷಾ ಶೆಟ್ಟಿ, ಪೂರ್ಣಿಮಾ, ರೂಪಾ, ಆತ್ಮಶಕ್ತಿ ಯ ಗೋಪಾಲ್, ಏನಪೋಯ ಆಸ್ಪತ್ರೆಯ ಭರತ್, ಸಮೀರ್ ನಮಿತ ಮೊದಲಾದವರು ಉಪಸ್ಥಿತರಿದ್ದರು. ಸಾರ್ವಜನಿಕರು ವಿವಿಧ ತಜ್ಞ ವೈದರಿಂದ ಉನ್ನತ ತಪಾಸಣೆ, ದಂತ ಚಿಕಿತ್ಸೆ ಮೊದಲಾದ ಸೌಲಭ್ಯಗಳ ಪ್ರಯೋಜನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು