3:40 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅಧಿಕಾರ ಸ್ವೀಕಾರ: ಬರ ಪರಿಹಾರಕ್ಕೆ ಆದ್ಯತೆ

23/01/2024, 21:50

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ಟಿ.ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು.
ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 2015 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ
ಅವರು, ಈ ಮೊದಲು ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‍ಆರ್‍ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು. ಅಲ್ಲದೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜಿ.ಪಂ. ಉಪಕಾರ್ಯದರ್ಶಿ ಬಿ. ಆನಂದ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಇದಕ್ಕೂ ಮುನ್ನ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ನಾಯಕನಹಟ್ಟಿಯ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ತಿಪ್ಪೇರುದ್ರಸ್ವಾಮಿ ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿ, ಅಧಿಕಾರ ವಹಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು