3:40 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

08/08/2021, 17:42

 

ಬೆಂಗಳೂರು (reporterkarnataka.com): 

ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ನೆಹರೂ ಅವರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ನವ ಭಾರತ ನಿರ್ಮಾಣದ ಕಲ್ಪನೆಯನ್ನು ಸಾಕಾರಗೊಳಿಸಲು ಮಹತ್ವದ ಪಾತ್ರ ವಹಿಸಿದ್ದಾರೆ. ದೇಶದ ಆಡಳಿತ ಚುಕ್ಕಾಣಿಯನ್ನು ಆಂಗ್ಲರ ಕೈಯಿಂದ ತೆಗೆದುಕೊಂಡು ಭಾರತದ
ಆಡಳಿತ ನಡೆಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಮಹಾತ್ಮ ಗಾಂಧೀಜಿ ಜತೆ ನೆಹರೂ ನಿಕಟ ಸಂಪರ್ಕ ಹೊಂದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ವಾಸ ಅನುಭವಿಸಿದ ನೆಹರೂ ಅವರ ಆದರ್ಶಗಳ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮೆಟ್ರೋ ಕಾಮಗಾರಿಗಾಗಿ ಸ್ಥಳಾಂತರಗೊಂಡಿದ್ದ ನೆಹರೂ ಅವರ ಪ್ರತಿಭೆಯನ್ನು ವಿಧಾನಸೌಧದ ಮುಂದೆ ಮರುಸ್ಥಾಪಿಸುವ ಮುಖೇನ ವಿಧಾನಸೌಧದ ಮೆರುಗು ಹೆಚ್ಚಿಸಿದಂತಾಗುತ್ತದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು