5:08 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್

25/01/2024, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು.

ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದಕ್ಕಾಗಿ. ಜನತೆಯಲ್ಲಿ ಕ್ಷಮೆಯಾಚಿಸಿದ ರೀತಿಯಲ್ಲಿ, ಅವರು ವೇದಿಕೆಗೆ ಆಗಮಿಸುತ್ತಾ ಸಾರ್ವಜನಿಕರ ಕಡೆ ಎರಡು ಕೈ ಎತ್ತಿ ಮುಗಿದು ನಮಸ್ಕರಿಸಿದರು. ಜನತಾದರ್ಶನದಲ್ಲಿ ನೂರಾರು ಜನರು ತಮ್ಮ ಅಹವಾಲುಗಳನ್ನು ಸಚಿವರಿಗೆ ನೀಡಿದರು, ವಿಕಲ ಚೇತನರು, ಮಹಿಳೆಯರು ವೃದ್ಧರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಂಡರು, ಅರ್ಜಿಗಳನ್ನು ನೀಡಿದರು. ಸಚಿವರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದರು. ಹಲವು ಸಮಸ್ಯೆಗಳಿಗೆ ವೇದಿಕೆಯಲ್ಲಿ ಹಾಜರಿದ್ದ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. ಕಮಲಾಪುರ ಹಾಗೂ ವಿವಿದೆಡೆಗಳಿಂದ ಆಗಮಿಸಿದ್ದ, ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗಿಯಾಗಿದ್ದರು.
11 ಗಂಟೆಗೆ ಆರಂಭವಾಗಬೇಕಿದ್ದ ಜನತಾ ದರ್ಶನ ಕಾರ್ಯಕ್ರಮ ತುಂಬಾ ತಡವಾಗಿ ಆರಂಭವಾಗಿದ್ದಕ್ಕೆ, ಅಹವಾಲುಗಳನ್ನು ಹೊತ್ತು ತಂದ ಜನರು ತೀವ್ರ ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು