6:01 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್

25/01/2024, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು.

ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದಕ್ಕಾಗಿ. ಜನತೆಯಲ್ಲಿ ಕ್ಷಮೆಯಾಚಿಸಿದ ರೀತಿಯಲ್ಲಿ, ಅವರು ವೇದಿಕೆಗೆ ಆಗಮಿಸುತ್ತಾ ಸಾರ್ವಜನಿಕರ ಕಡೆ ಎರಡು ಕೈ ಎತ್ತಿ ಮುಗಿದು ನಮಸ್ಕರಿಸಿದರು. ಜನತಾದರ್ಶನದಲ್ಲಿ ನೂರಾರು ಜನರು ತಮ್ಮ ಅಹವಾಲುಗಳನ್ನು ಸಚಿವರಿಗೆ ನೀಡಿದರು, ವಿಕಲ ಚೇತನರು, ಮಹಿಳೆಯರು ವೃದ್ಧರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಂಡರು, ಅರ್ಜಿಗಳನ್ನು ನೀಡಿದರು. ಸಚಿವರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದರು. ಹಲವು ಸಮಸ್ಯೆಗಳಿಗೆ ವೇದಿಕೆಯಲ್ಲಿ ಹಾಜರಿದ್ದ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. ಕಮಲಾಪುರ ಹಾಗೂ ವಿವಿದೆಡೆಗಳಿಂದ ಆಗಮಿಸಿದ್ದ, ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗಿಯಾಗಿದ್ದರು.
11 ಗಂಟೆಗೆ ಆರಂಭವಾಗಬೇಕಿದ್ದ ಜನತಾ ದರ್ಶನ ಕಾರ್ಯಕ್ರಮ ತುಂಬಾ ತಡವಾಗಿ ಆರಂಭವಾಗಿದ್ದಕ್ಕೆ, ಅಹವಾಲುಗಳನ್ನು ಹೊತ್ತು ತಂದ ಜನರು ತೀವ್ರ ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು