4:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು