5:54 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು