7:11 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಗುಟುಕು ನೀರಿಲ್ಲ!: ಬಾಣಂತಿ-ಮಕ್ಕಳ ಪರದಾಟ; ಅಚಾನಕ್ ಸಮಸ್ಯೆ ಎನ್ನುತ್ತಾರೆ ಶಾಸಕರು

08/08/2021, 20:14

ಮಂಗಳೂರು(reporterkarnataka.com): ಶತಮಾನದ ಇತಿಹಾಸವಿರುವ ಜೆಲ್ಲೆಯ ಹೆರಿಗೆ ಆಸ್ಪತ್ರೆಯಾದ ಮಂಗಳೂರು ಲೇಡಿಗೋಶನ್ ಆಸ್ಪತ್ರೆ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ನೀರಿಲ್ಲದೆ 100ಕ್ಕೂ ಹೆಚ್ಚು ಬಾಣಂತಿಯರು ಹಾಗೂ ನವಜಾತ ಶಿಶುಗಳು ತೊಂದರೆಗೀಡಾಗಿದ್ದಾರೆ.

ಲೇಡಿಗೋಶನ್ ಆಸ್ಪತ್ರೆಗೆ ಜಿಲ್ಲೆಯ ವಿವಿಧ ಕಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಹೆರಿಗೆಗಾಗಿ ಆಗಮಿಸುತ್ತಾರೆ. ಇತರ ಕಾಯಿಲೆಗಳ ಚಿಕಿತ್ಸೆಗೂ ಮಹಿಳೆಯರು ಇಲ್ಲಿ ದಾಖಲಾಗುತ್ತಾರೆ. ಪ್ರಸ್ತುತ 100ಕ್ಕೂ ಅಧಿಕ ಬಾಣಂತಿಯರು ಹಾಗೂ ಅವರ ನವಜಾತ ಶಿಶುಗಳು ಆರೈಕೆ ಪಡೆಯುತ್ತಿದೆ. ಇತರ ಕಾಯಿಲೆಗಳ ಚಿಕಿತ್ಸೆಗೆ ಬಂದವರು ಸೇರಿ 250ಕ್ಕೂ ಹೆಚ್ಚು ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆ ಹೆರಿಗೆಗೆ ದಾಖಲಾದ ಗರ್ಭಿಣಿಯರು ಇದ್ದಾರೆ. ಆದರೆ ಏನೂ ಮಾಡುವುದು ಮನುಷ್ಯರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿರುವ ನೀರು ಸರಬರಾಜು ನಿಂತು ಹೋಗಿದೆ. ಕಾರಣ ಏನೆಂದರೆ ಲೇಡಿಗೋಶನ್ ಆಸ್ಪತ್ರೆಯ ಓವರ್ ಹೆಡ್ ಟ್ಯಾಂಕ್ ಗೆ ನೀರು ಲಿಫ್ಟ್ ಮಾಡುವ  ಪಂಪ್ ಹಾಳಾಗಿದೆ. ಹಾಗಾದರೆ ಇಷ್ಟೊಂದು ದೊಡ್ಡ ಆಸ್ಪತ್ರೆಗೆ ಸ್ಟಾಂಡ್ ಬೈ ಪಂಪಿನ ವ್ಯವಸ್ಥೆ ಇಲ್ಲವೇ ಎಂದು ನೀವು ಯೋಚಿಸಬಹುದು. ಪರ್ಯಾಯ ಪಂಪ್ ಸೆಟ್ ನ ವ್ಯವಸ್ಥೆಯೂ ಇದೆ. ಆದರೆ ಅದು ಕೂಡ ಈ ಮುನ್ನವೇ ಕೆಟ್ಟು ಹೋಗಿದೆ. ಅದನ್ನು ಇನ್ನೂ ದುರಸ್ತಿ ಮಾಡಿಲ್ಲ. ಈಗ ಇನ್ನೊಂದು ಪಂಪ್ ಸೆಟ್ ಕೂಡ ಕೆಟ್ಟು ಹೋಗಿದೆ. ಇದಕ್ಕೆಲ್ಲ ಲೇಡಿಗೋಶನ್ ಆಸ್ಪತ್ರೆ ಆಡಳಿತ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯ ವೇ ಕಾರಣವಾಗಿದೆ ಎಂದು ಸಾರ್ವಜನಿಕರು ದೂರುತ್ತಾರೆ.

ಇದೊಂದು ಅಚಾನಕ್ ಆಗಿರುವ ಸಮಸ್ಯೆ. ಇದರ ಬಗ್ಗೆ ರಾಜಕೀಯ ಬೇಡ. ಹೊಸ ಪಂಪ್ ಅಳವಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.

ಪಂಪ್ ಸೆಟ್ ಕೆಟ್ಟು ಹೋಗಿದೆ. ವೀಕೆಂಡ್ ಲಾಕ್ ಡೌನ್ ನಿಂದ ಅಂಗಡಿಗಳು ಮುಚ್ಚಿರುವುದರಿಂದ ಪಂಪ್ ಸೆಟ್ ನ ಬಿಡಿಭಾಗ ಸಿಗಲಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು