3:40 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಿದ ನಿವೃತ್ತ ಸರಕಾರಿ ಅಧಿಕಾರಿ ಕುಸಿದು ಬಿದ್ದು ಸಾವು

26/01/2024, 19:30

ಮಂಗಳೂರು(reporterkarnataka.com): ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಇಂದುಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರೀಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಯಿತು.
ಮೂಲತ: ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು