1:58 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು