10:16 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು