2:28 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನರೇಗಾ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ: ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಶ್ರೀನಿವಾಸ ರೆಡ್ಡಿ ಅಮಾನತು

27/01/2024, 14:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನರೇಗಾದಲ್ಲಿ ಅವ್ಯವಹಾರ ಆರೋಪ ಸಂಬಂಧ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಎಸ್.ಎಂ. ಶ್ರೀನಿವಾಸರೆಡ್ಡಿ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿನ್ನು ಅಮಾನತುಗೊಳಿಸಲಾಗಿದೆ.
ನರೇಗಾ ಕಾಮಗಾರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಕಾಮಗಾರಿ ನಡೆಸದೆ ಬಿಲ್ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸಂತಪ್ಪ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೊತ್ತಹುಡ್ಯ, ಬೈರಗಾನಹಳ್ಳಿ ಗ್ರಾಮದ ಗೋಮಾಳ ಸರ್ವೇ ನಂ 124 ರಲ್ಲಿ ಗೋಕುಂಟೆ ನಿರ್ಮಾಣ ಮಾಡಿದ್ದು, ಈ ಕಾಮಗಾರಿಗಳಲ್ಲಿ ನ್ಯೂನತೆ ಕಂಡಿಬಂದಿದ್ದ ಹಿನ್ನೆಲೆಯಲ್ಲಿ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚನೆ ನೀಡಿದ್ದರು.
ಉಪ ಕಾರ್ಯದರ್ಶಿ ತಂಡ ಕಾಮಗಾರಿ ಪರಿಶೀಲಿಸಿ ಹಾಗೂ ಕಾಮಗಾರಿಗಳ ಬಗ್ಗೆ ದಾಖಲೆ ಪರಿಶೀಲಿಸಿದ ವೇಳೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೂಲಿ ಕಾರ್ಮಿಕರಿಂದ ಕಾಮಗಾರಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಯಾವುದೇ ದಾಖಲೆಗಳು ಸಿಕ್ಕಿಲ್ಲ.
ಗೋಕುಂಟೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಅಳತೆ ಪರಿಶೀಲಿಸಿದಾಗ ಅಳತೆಯಲ್ಲಿ ವ್ಯತ್ಯಾಸವಿದ್ದು, ಕೂಲಿಯ ವೆಚ್ಚವನ್ನು ಪಾವತಿ ಮಾಡಿರುವುದು ಕಂಡುಬಂದಿರುತ್ತದೆ.
ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೂ, ಕಾಮಗಾರಿ ಅನುಷ್ಠಾನಕ್ಕೂ ಮತ್ತು ಅಳತೆ ಪುಸ್ತಕಕ್ಕೂ ಯಾವುದೇ ರೀತಿಯ ತಾಳೆಯಾಗದಿರುವುದು ಕಂಡು ಬಂದಿದೆ. ಮರಸನಪಲ್ಲಿ ಗ್ರಾಮ ಸತೀಶ್ ಜಮೀನಿನ ಕಾಲುವೆಯ ಕಾಮಗಾರಿಯಲ್ಲಿ ವ್ಯತ್ಯಾಸವಿರುವುದು ಗೊತ್ತಾಗಿದೆ.
ನ್ಯೂನತೆ ಸಂಬಂಧ ಸಮಾಜಾಯಿಷಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೂ ಪೂರಕ ದಾಖಲೆ ನೀಡದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು