4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: 6ನೇ ತಂಡದ ಉದ್ಘಾಟನೆ

27/01/2024, 23:15

ಮಂಗಳೂರು(reporterKarnataka.com): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಭಾರತೀಯ ಕೃಷಿ ಅನುಸಂಧಾನ ಪರಿಷತ್-ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, (ಮ್ಯಾನೇಜ್), ಹೈದರಾಬಾದ್ ಮತ್ತು ಕೃಷಿ ಇಲಾಖೆ, ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ 6ನೇ ತಂಡದ ಉದ್ಘಾಟನಾ ಸಮಾರಂಭ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಡಾ. ಕೆಂಪೇಗೌಡ ಎಚ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪರಿಕರ ಮಾರಾಟಗಾರರು ವ್ಯಾಪಾರದ ಜೊತೆಗೆ ನೈತಿಕತೆಯನ್ನು ಹೊಂದಿರಬೇಕು. ಪ್ರಮಾಣ ಪತ್ರಕ್ಕಾಗಿ ಮಾತ್ರವಲ್ಲದೆ ಜ್ಞಾನದ ಅವಶ್ಯಕತೆಕಾಗಿ ದೇಸಿ ಕೋರ್ಸ್ ಅವಶ್ಯವಾಗಿದೆ ಎಂದು ಹೇಳಿದರು.
ದೇಸಿ ತರಬೇತಿಯ ರಾಜ್ಯ ನೋಡಲ್ ಅಧಿಕಾರಿಯಾದ ಡಾ. ಬಿ. ಕಲ್ಪನಾ ಅವರು ಪ್ರಾಸ್ತಾವಿಕ ನುಡಿಯನ್ನಾಡಿ ಪರಿಕರ ಮಾರಾಟಗಾರರಿಗೆ ದೇಸಿ ತರಬೇತಿಯ ಅಗತ್ಯತೆಯ ಬಗ್ಗೆ, ದೇಸಿ ತರಬೇತಿಯ ಅನುಷ್ಠಾನದ ಬಗ್ಗೆ, ದೇಸಿ ತರಬೇತಿಯ ಮೂಲ ಉದ್ಧೇಶದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ದೇಶದಲ್ಲಿ ಈಗಾಗಲೇ 2,80,000 ಜನ ದೇಸಿ ಕೋರ್ಸ್ ಗೆ ನೊಂದವಣಿ ಮಾಡಿದ್ದು 80,200 ಅಭ್ಯರ್ಥಿ ಗಳು ಪ್ರಮಾಣ ಪತ್ರವನ್ನು ಪಡೆದಿರುತ್ತಾರೆ. 22,000 ಅಭ್ಯರ್ಥಿ ಗಳು ಪ್ರಸ್ತುತ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೀನುಗಾರಿಕಾ ಕಾಲೇಜಿನ ಡೀನ್ ಆದ ಡಾ. ಆಂಜನೇಯಪ್ಪ ಎಚ್. ಎನ್. ಅವರು ಮಾತನಾಡಿ ಪರಿಕರ ಮಾರಾಟಗಾರರು ತಮ್ಮನ್ನು ತಾವೇ ಸಂಪನ್ಮೂಲ ವ್ಯಕ್ತಿಯಾಗಿ ಮೊದಲು ಪರಿವರ್ತಿಸಿಕೊಳ್ಳಬೇಕು. ಇತರ ಪರಿಕರ ಮಾರಾಟಗಾರರೊಂದಿಗೆ ಸಂವಾದ ನಡೆಸಿ ಮಾಹಿತಿಯನ್ನು ಹಂಚಿಕೊಂಡು ರೈತರಿಗೆ ಸೂಕ್ತ ಸಲಹೆಯನ್ನು ನೀಡಬೇಕು ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಯಾದ ಡಾ.ರವೀಂದ್ರ ಗೌಡ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೇಂದ್ರದ ವಿಜ್ಞಾನಿ ಮತ್ತು ದೇಸಿ ಸಂಯೋಜಕರಾದ ಡಾ. ಶಿವಕುಮಾರ್ ಆರ್ ಸ್ವಾಗತಿಸಿದರು, ಡಾ. ಮಲ್ಲಿಕಾರ್ಜುನ ಎಲ್., ವಿಜ್ಞಾನಿ (ಮಣ್ಣು ವಿಜ್ಞಾನ) ಇವರು ವಂದಿಸಿದರು, ದೇಸಿ ಕಾರ್ಯಕ್ರಮದ ಅನುವುಗಾರರಾದ ವಿಜಿತ ವಿ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು 40 ಅಭ್ಯರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು