6:53 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ ನಡೆಯಲಿದೆ ಡಿವೈಎಫ್ಐ ರಾಜ್ಯ ಸಮ್ಮೇಳನ: ಮುನೀರ್ ಕಾಟಿಪಳ್ಳ

27/01/2024, 23:09

ಮಂಗಳೂರು(reporterkarnataka.com): ದೇಶದಲ್ಲಿಂದು ಯಾವತ್ತೂ ಕಂಡು ಕೇಳರಿಯದಷ್ಟು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಬೇಕಾಗಿದ್ದ ಯುವಜನತೆ ಬಿಜೆಪಿಯು ರಾಮ ಮಂದಿರದ ನಿರ್ಮಾಣದ ಹೆಸರಲ್ಲಿ ನಡೆಸುವ ಧರ್ಮ ರಾಜಕಾರಣದ ಚುನಾವಣೆ ಸಿದ್ದತೆಗೆ ಬಲಿಯಾಗುತ್ತಿದ್ದಾರೆ. ಕೇಂದ್ರ ಸರಕಾರದ ಯುವಜನ ವಿರೋಧಿ ನೀತಿಗಳ ವಿರುದ್ಧ ಡಿವೈಎಫ್ಐ ದೇಶವ್ಯಾಪಿಯಲ್ಲಿ ನಿರುದ್ಯೋಗದ ವಿರುದ್ಧ ಹೋರಾಟ ಸಂಘಟಿಸುತ್ತಿದ್ದು ಕರ್ನಾಟಕ ರಾಜ್ಯದಲ್ಲೂ ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದರು.


ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಆಯೋಜಿಸಿದ ರಾಜ್ಯ ಸಮ್ಮೇಳನದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ವರಿಗೂ ಶಿಕ್ಷಣ, ಉದ್ಯೋಗದ ಹಕ್ಕಿಗಾಗಿ ರಾಜ್ಯಾದ್ಯಂತ ಸುದೀರ್ಘವಾದ ಚಳುವಳಿಯನ್ನು ಕಟ್ಟಿದ ಡಿವೈಎಫ್ಐ ದ.ಕ. ಜಿಲ್ಲೆಯಲ್ಲಿ ಕೋಮುವಾದಿಗಳ ಅಟ್ಟಹಾಸದ ನಡುವೆಯೂ ಜನಪರ ಚಳುವಳಿಗಳನ್ನು ಮುನ್ನಡೆಸಿ ಗೆಲುವನ್ನು ಸಾಧಿಸಿದೆ. ಇತ್ತೀಚೆಗಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟ ಐತಿಹಾಸಿಕ ಗೆಲುವನ್ನು ಸಾಧಿಸಿ ಈವರೆಗೆ ಸುಮಾರು 84 ಕೋಟಿಗಳಷ್ಟು ಹಣವನ್ನು ಜನರ ಜೇಬಿನಿಂದ ಸುಲಿಯುವ ಯೋಜನೆಗೆ ಅಂತ್ಯ ಇಟ್ಟಿದೆ. ಆರೋಗ್ಯದ ಪ್ರಶ್ನೆಯಲ್ಲಿ ಖಾಸಗೀ ಆಸ್ಪತ್ರೆಗಳ ಸುಲಿಗೆ ನೀತಿಯ ವಿರುದ್ಧವೂ ದಿನನಿತ್ಯದ ಮದ್ಯಪ್ರವೇಶವನ್ನು ಡಿವೈಎಫ್ಐ ಮುನ್ನಡೆಸುತ್ತಿದೆ. ಡಿವೈಎಫ್ಐ ನಡೆಸುವ ಚಳುವಳಿಯನ್ನು ಇನ್ನಷ್ಟು ಮುನ್ನಡೆಸಲು 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ಮಂಗಳೂರಿನಲ್ಲಿ ನಡೆಯಲಿದ್ದು ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸಿ ಭಾಗವಹಿಸುವ ಪ್ರತಿನಿಧಿಗಳು ಯುವಜನರನ್ನು ಕಾಡುವ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ ಮತ್ತು ಯುವಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಸರಕಾರಗಳ ವಿರುದ್ಧ ಹೋರಾಟಗಳನ್ನು ರೂಪಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕಾರ್ಮಿಕ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷರಾದ ಜಗದೀಶ್ ಬಜಾಲ್ , ಬಜಾಲ್ ಘಟಕದ ಅಧ್ಯಕ್ಷರಾದ ದೀಕ್ಷಿತ್ ಭಂಡಾರಿ, ಕಾರ್ಯದರ್ಶಿ ಆನಂದ ಎನೆಲ್ಮಾರ್ ಉಪಸ್ಥಿತರಿದ್ದರು.
ಸಿದ್ದತಾ ಸಭೆಯ ನೇತೃತ್ವವನ್ನು ಡಿವೈಎಫ್ಐ ಸ್ಥಳೀಯ ಮುಖಂಡರಾದ ಧಿರಾಜ್ ಬಜಾಲ್, ಪ್ರಕಾಶ್ ಶೆಟ್ಟಿ, ದೀಪಕ್ ಬಜಾಲ್, ಕೃಷ್ಣ, ಪ್ರಿತೇಶ್ ಬಜಾಲ್, ಅಶೋಕ್ ಎನೆಲ್ಮಾರ್ , ನೂರುದ್ದೀನ್ ಪಕ್ಕಲಡ್ಕ ಮುಂತಾದವರು ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು