4:40 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅಭಿ ಎನ್. ನಿರ್ದೇಶನದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆಗೆ

29/01/2024, 19:56

ಮಂಗಳೂರು(reporterkarnataka.com): ಸ್ಮೈಲಿYB ಕ್ರಿಯೇಷನ್ಸ್ ಬೆಂಗಳೂರು ಬ್ಯಾನರ್ ನಲ್ಲಿ ನಿರ್ಮಾಪಕರಾದ ಎಸ್. ಚಂದ್ರಮೋಹನ್ ನಿರ್ಮಾಣದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
ನಗರದಲ್ಲಿ ಭಾನುವಾರ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಅಭಿ ಎನ್. ಅವರು, ಇದೇ ಮೊದಲ ಬಾರಿ ಕನ್ನಡ ಚಿತ್ರವೊಂದನ್ನು ನಿರ್ದೇಶಿಸಿದ್ದು, ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ. ಸಿನಿ ಪ್ರಿಯರಿಗೆ ಖಂಡಿತಾ ಈ ಚಿತ್ರ ಇಷ್ಟವಾಗಲಿದೆ ಎಂದರು.
ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರು, ಸಕಲೇಶಪುರ ಮತ್ತು ಮಂಗಳೂರಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ನಡೆದಿದೆ. ಅತ್ಯುತ್ತಮ ಕಥಾ ಹಂದರವನ್ನು ಕ್ರಷ್ ಒಳಗೊಂಡಿದೆ. ಉತ್ತಮ ಹಾಡುಗಳೂ ಕೂಡ ಇದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದವರು ತಿಳಿಸಿದರು.


ನಿರ್ಮಾಪಕ ಎಸ್.ಚಂದ್ರಮೋಹನ್ ಅವರು ಮಾತನಾಡಿ, ಇದೊಂದು ತಂದೆ ಮಗ ಮತ್ತು ತಾಯಿ ಮಗಳ ಬಾಂಧವ್ಯದ ಕಥಾಹಂದರವನ್ನು ಹೊಂದಿದ್ದು ಯುವ ಜನಾಂಗವನ್ನು ಆಕರ್ಷಿಸುವ ಸಾಕಷ್ಟು ಅಂಶಗಳನ್ನು ಸಿನಿಮಾ ಹೊಂದಿದೆ ಎಂದರು.
ಈ ಹಿಂದೆ ರಂಗ್ ಬಿರಂಗಿ ಮತ್ತು ಇದೇ ಅಂತರಂಗ ಶುದ್ಧಿ ಎಂಬ ಎರಡು ಸಿನಿಮಾಗಳ ಮೂಲಕ ಮನೆ ಮಾತಾಗಿದ್ದ ಪಂಚಾಕ್ಷರಿ ನಾಯಕನಟನಾಗಿ ನಟಿಸಿದ್ದು ಉತ್ತರ ಕರ್ನಾಟಕದ ಬೆಡಗಿ ಪ್ರತಿಭಾ ಸೊಪ್ಪಿಮಠ ನಾಯಕಿಯಾಗಿ ನಟಿಸಿದ್ದಾರೆ. ಅನುಭವ ಸಿನಿಮಾ ಖ್ಯಾತಿಯ ಅಭಿನಯರವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೆಸರಾಂತ ಪೋಷಕ ನಟ ಮಂಜುನಾಥ್ ಹೆಗ್ಗಡೆ, ಮಂಗಳೂರಿನ ವಿನೀತ್, ಸುಧೀರ್ ರಾಜ್ ಉರ್ವ, ಸಂತೋಷ್ ಕೊಲ್ಯ ರಂತಹ ಖ್ಯಾತ ನಟರು ಈ ಸಿನಿಮಾದ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸಿ.ಎಸ್.ಸತೀಶ್ ಛಾಯಾಗ್ರಹಣ, ಸಂಕಲನಕಾರರಾಗಿ ಪವನ್, ವಿನೀತ್ ರಾಜ್ ಮೆನನ್ ರವರ ಸುಮಧುರ ಸಂಗೀತವಿದ್ದು, ಯು. ವಿ.ಅನುತ್ತಮ್ ಮತ್ತು ಅಭಿ .ಎನ್. ಸಾಹಿತ್ಯ ರಚಿಸಿದ್ದಾರೆ.
‘ಕ್ರಷ್ ’ ಹಾಡುಬಿಡುಗಡೆ ಸಂದರ್ಭ ನಟರಾದ ಸಂತೋಷ್ ಕೊಲ್ಯ, ಸಮರ್ಥ್, ನಟಿ ದಿವ್ಯಶ್ರೀ ಕಾವೂರು, ಸಹ ನಿರ್ದೇಶಕ ಜೈಚಂದ್ರ, ಗೀತೆ ರಚನೆಕಾರ ಅನುತ್ತಮ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು