2:40 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಅಭಿ ಎನ್. ನಿರ್ದೇಶನದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆಗೆ

29/01/2024, 19:56

ಮಂಗಳೂರು(reporterkarnataka.com): ಸ್ಮೈಲಿYB ಕ್ರಿಯೇಷನ್ಸ್ ಬೆಂಗಳೂರು ಬ್ಯಾನರ್ ನಲ್ಲಿ ನಿರ್ಮಾಪಕರಾದ ಎಸ್. ಚಂದ್ರಮೋಹನ್ ನಿರ್ಮಾಣದ ‘ಕ್ರಷ್’ ಕನ್ನಡ ಚಲನಚಿತ್ರ ಫೆ.2ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
ನಗರದಲ್ಲಿ ಭಾನುವಾರ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಅಭಿ ಎನ್. ಅವರು, ಇದೇ ಮೊದಲ ಬಾರಿ ಕನ್ನಡ ಚಿತ್ರವೊಂದನ್ನು ನಿರ್ದೇಶಿಸಿದ್ದು, ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದೆ. ಸಿನಿ ಪ್ರಿಯರಿಗೆ ಖಂಡಿತಾ ಈ ಚಿತ್ರ ಇಷ್ಟವಾಗಲಿದೆ ಎಂದರು.
ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರು, ಸಕಲೇಶಪುರ ಮತ್ತು ಮಂಗಳೂರಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ನಡೆದಿದೆ. ಅತ್ಯುತ್ತಮ ಕಥಾ ಹಂದರವನ್ನು ಕ್ರಷ್ ಒಳಗೊಂಡಿದೆ. ಉತ್ತಮ ಹಾಡುಗಳೂ ಕೂಡ ಇದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದವರು ತಿಳಿಸಿದರು.


ನಿರ್ಮಾಪಕ ಎಸ್.ಚಂದ್ರಮೋಹನ್ ಅವರು ಮಾತನಾಡಿ, ಇದೊಂದು ತಂದೆ ಮಗ ಮತ್ತು ತಾಯಿ ಮಗಳ ಬಾಂಧವ್ಯದ ಕಥಾಹಂದರವನ್ನು ಹೊಂದಿದ್ದು ಯುವ ಜನಾಂಗವನ್ನು ಆಕರ್ಷಿಸುವ ಸಾಕಷ್ಟು ಅಂಶಗಳನ್ನು ಸಿನಿಮಾ ಹೊಂದಿದೆ ಎಂದರು.
ಈ ಹಿಂದೆ ರಂಗ್ ಬಿರಂಗಿ ಮತ್ತು ಇದೇ ಅಂತರಂಗ ಶುದ್ಧಿ ಎಂಬ ಎರಡು ಸಿನಿಮಾಗಳ ಮೂಲಕ ಮನೆ ಮಾತಾಗಿದ್ದ ಪಂಚಾಕ್ಷರಿ ನಾಯಕನಟನಾಗಿ ನಟಿಸಿದ್ದು ಉತ್ತರ ಕರ್ನಾಟಕದ ಬೆಡಗಿ ಪ್ರತಿಭಾ ಸೊಪ್ಪಿಮಠ ನಾಯಕಿಯಾಗಿ ನಟಿಸಿದ್ದಾರೆ. ಅನುಭವ ಸಿನಿಮಾ ಖ್ಯಾತಿಯ ಅಭಿನಯರವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಹೆಸರಾಂತ ಪೋಷಕ ನಟ ಮಂಜುನಾಥ್ ಹೆಗ್ಗಡೆ, ಮಂಗಳೂರಿನ ವಿನೀತ್, ಸುಧೀರ್ ರಾಜ್ ಉರ್ವ, ಸಂತೋಷ್ ಕೊಲ್ಯ ರಂತಹ ಖ್ಯಾತ ನಟರು ಈ ಸಿನಿಮಾದ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಸಿ.ಎಸ್.ಸತೀಶ್ ಛಾಯಾಗ್ರಹಣ, ಸಂಕಲನಕಾರರಾಗಿ ಪವನ್, ವಿನೀತ್ ರಾಜ್ ಮೆನನ್ ರವರ ಸುಮಧುರ ಸಂಗೀತವಿದ್ದು, ಯು. ವಿ.ಅನುತ್ತಮ್ ಮತ್ತು ಅಭಿ .ಎನ್. ಸಾಹಿತ್ಯ ರಚಿಸಿದ್ದಾರೆ.
‘ಕ್ರಷ್ ’ ಹಾಡುಬಿಡುಗಡೆ ಸಂದರ್ಭ ನಟರಾದ ಸಂತೋಷ್ ಕೊಲ್ಯ, ಸಮರ್ಥ್, ನಟಿ ದಿವ್ಯಶ್ರೀ ಕಾವೂರು, ಸಹ ನಿರ್ದೇಶಕ ಜೈಚಂದ್ರ, ಗೀತೆ ರಚನೆಕಾರ ಅನುತ್ತಮ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು