3:00 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ವಿವಿ ಅಂತಾರಾಷ್ಟ್ರೀಯ ಯೋಗ ಕಾರ್ಯಾಗಾರದಲ್ಲಿ ಪುತ್ತೂರಿನ ನೃತ್ಯೋಪಾಸನದಿಂದ ‘ನೃತ್ಯೋಹಂ’

30/01/2024, 15:22

ಕೊಣಾಜೆ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠವು ದಕ್ಷಿಣ ಕೊರಿಯಾದ ವಾಂಕ್ ವಾಂಗ್ ಡಿಜಿಟಲ್ ಯುನಿವರ್ಸಿಟಿ ಸಹಯೋಗದೊಂದಿಗೆ ಏರ್ಪಡಿಸಿದ ‘ ಇಂಟರ್ ನ್ಯಾಷನಲ್ ಯೋಗ ಟೀಚರ್ಸ್ ಟ್ರೈನಿಂಗ್ ಕಾರ್ಯಾಗಾರದಲ್ಲಿ ಪುತ್ತೂರಿನ ವಿದುಷಿ ಶಾಲಿನಿ ಆತ್ಮಭೂಷಣ್ ಅವರ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇವರಿಂದ ನೃತ್ಯೋಹಂ ಭರತನಾಟ್ಯ ಕಾರ್ಯಕ್ರಮ ವಿವಿಯ ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ವಿದೇಶದಿಂದ ಬಂದ ಯೋಗ ಪ್ರತಿನಿಧಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಏರ್ಪಡಿಸಿದ ಈ ಕಾರ್ಯಕ್ರಮವು ಪುಷ್ಪಾಂಜಲಿಯೊಂದಿಗೆ ಆರಂಭಗೊಂಡಿತು. ಒಂದೂವರೆ ಗಂಟೆಗಳ ಕಾಲ ನಡೆದ ಈ ನೃತ್ಯ ಕಾರ್ಯಕ್ರಮದಲ್ಲಿ ಅರ್ಧನಾರೀಶ್ವರ ಸ್ತುತಿ, ವೇಲವ ಎಂದು ಆರಂಭಗೊಂಡ ಸುಬ್ರಹ್ಮಣ್ಯನ ಕುರಿತಾದ ನೃತ್ಯ, ಭಜನ್ ಶೈಲಿಯ ಮರಾಠಿ ಹಾಡಿನ ಬೊಮ್ಮ ಬೊಮ್ಮ, ಕನ್ನಡ ಗೀತೆಗಳಾದ ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ, ಕುವೆಂಪು ಅವರ ಕುಣಿಯೋಣಾರು, ಕಾಂತಾರದ ಜನಪ್ರಿಯ ಹಾಡಾದ ವರಾಹರೂಪಂ,ತುಳು ಗೀತೆ ಎಂಚೆಂಚಿ ಪುಣ್ಣುಲು ಎಂಕುಲತ್ತ್ ಮೊದಲಾದ ಬಹುಭಾಷೆ ಮತ್ತು ಸಂಸ್ಕೃತಿಯ ಭಾವವನ್ನು ತಂಡ ನೃತ್ಯರೂಪದಲ್ಲಿ ಪ್ರದರ್ಶಿಸಿತು.
ಕೊನೆಯಲ್ಲಿ ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಕೃಷ್ಣಶರ್ಮ ಮತ್ತು ದಕ್ಷಿಣ ಕೊರಿಯಾ ವಿವಿಯ ಪ್ರತಿನಿಧಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಇವರನ್ನು ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು