6:56 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ವಿವಿ ಅಂತಾರಾಷ್ಟ್ರೀಯ ಯೋಗ ಕಾರ್ಯಾಗಾರದಲ್ಲಿ ಪುತ್ತೂರಿನ ನೃತ್ಯೋಪಾಸನದಿಂದ ‘ನೃತ್ಯೋಹಂ’

30/01/2024, 15:22

ಕೊಣಾಜೆ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠವು ದಕ್ಷಿಣ ಕೊರಿಯಾದ ವಾಂಕ್ ವಾಂಗ್ ಡಿಜಿಟಲ್ ಯುನಿವರ್ಸಿಟಿ ಸಹಯೋಗದೊಂದಿಗೆ ಏರ್ಪಡಿಸಿದ ‘ ಇಂಟರ್ ನ್ಯಾಷನಲ್ ಯೋಗ ಟೀಚರ್ಸ್ ಟ್ರೈನಿಂಗ್ ಕಾರ್ಯಾಗಾರದಲ್ಲಿ ಪುತ್ತೂರಿನ ವಿದುಷಿ ಶಾಲಿನಿ ಆತ್ಮಭೂಷಣ್ ಅವರ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇವರಿಂದ ನೃತ್ಯೋಹಂ ಭರತನಾಟ್ಯ ಕಾರ್ಯಕ್ರಮ ವಿವಿಯ ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ವಿದೇಶದಿಂದ ಬಂದ ಯೋಗ ಪ್ರತಿನಿಧಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಏರ್ಪಡಿಸಿದ ಈ ಕಾರ್ಯಕ್ರಮವು ಪುಷ್ಪಾಂಜಲಿಯೊಂದಿಗೆ ಆರಂಭಗೊಂಡಿತು. ಒಂದೂವರೆ ಗಂಟೆಗಳ ಕಾಲ ನಡೆದ ಈ ನೃತ್ಯ ಕಾರ್ಯಕ್ರಮದಲ್ಲಿ ಅರ್ಧನಾರೀಶ್ವರ ಸ್ತುತಿ, ವೇಲವ ಎಂದು ಆರಂಭಗೊಂಡ ಸುಬ್ರಹ್ಮಣ್ಯನ ಕುರಿತಾದ ನೃತ್ಯ, ಭಜನ್ ಶೈಲಿಯ ಮರಾಠಿ ಹಾಡಿನ ಬೊಮ್ಮ ಬೊಮ್ಮ, ಕನ್ನಡ ಗೀತೆಗಳಾದ ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ, ಕುವೆಂಪು ಅವರ ಕುಣಿಯೋಣಾರು, ಕಾಂತಾರದ ಜನಪ್ರಿಯ ಹಾಡಾದ ವರಾಹರೂಪಂ,ತುಳು ಗೀತೆ ಎಂಚೆಂಚಿ ಪುಣ್ಣುಲು ಎಂಕುಲತ್ತ್ ಮೊದಲಾದ ಬಹುಭಾಷೆ ಮತ್ತು ಸಂಸ್ಕೃತಿಯ ಭಾವವನ್ನು ತಂಡ ನೃತ್ಯರೂಪದಲ್ಲಿ ಪ್ರದರ್ಶಿಸಿತು.
ಕೊನೆಯಲ್ಲಿ ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಕೃಷ್ಣಶರ್ಮ ಮತ್ತು ದಕ್ಷಿಣ ಕೊರಿಯಾ ವಿವಿಯ ಪ್ರತಿನಿಧಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಇವರನ್ನು ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು