4:34 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ವಿವಿ ಅಂತಾರಾಷ್ಟ್ರೀಯ ಯೋಗ ಕಾರ್ಯಾಗಾರದಲ್ಲಿ ಪುತ್ತೂರಿನ ನೃತ್ಯೋಪಾಸನದಿಂದ ‘ನೃತ್ಯೋಹಂ’

30/01/2024, 15:22

ಕೊಣಾಜೆ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠವು ದಕ್ಷಿಣ ಕೊರಿಯಾದ ವಾಂಕ್ ವಾಂಗ್ ಡಿಜಿಟಲ್ ಯುನಿವರ್ಸಿಟಿ ಸಹಯೋಗದೊಂದಿಗೆ ಏರ್ಪಡಿಸಿದ ‘ ಇಂಟರ್ ನ್ಯಾಷನಲ್ ಯೋಗ ಟೀಚರ್ಸ್ ಟ್ರೈನಿಂಗ್ ಕಾರ್ಯಾಗಾರದಲ್ಲಿ ಪುತ್ತೂರಿನ ವಿದುಷಿ ಶಾಲಿನಿ ಆತ್ಮಭೂಷಣ್ ಅವರ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇವರಿಂದ ನೃತ್ಯೋಹಂ ಭರತನಾಟ್ಯ ಕಾರ್ಯಕ್ರಮ ವಿವಿಯ ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ವಿದೇಶದಿಂದ ಬಂದ ಯೋಗ ಪ್ರತಿನಿಧಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಏರ್ಪಡಿಸಿದ ಈ ಕಾರ್ಯಕ್ರಮವು ಪುಷ್ಪಾಂಜಲಿಯೊಂದಿಗೆ ಆರಂಭಗೊಂಡಿತು. ಒಂದೂವರೆ ಗಂಟೆಗಳ ಕಾಲ ನಡೆದ ಈ ನೃತ್ಯ ಕಾರ್ಯಕ್ರಮದಲ್ಲಿ ಅರ್ಧನಾರೀಶ್ವರ ಸ್ತುತಿ, ವೇಲವ ಎಂದು ಆರಂಭಗೊಂಡ ಸುಬ್ರಹ್ಮಣ್ಯನ ಕುರಿತಾದ ನೃತ್ಯ, ಭಜನ್ ಶೈಲಿಯ ಮರಾಠಿ ಹಾಡಿನ ಬೊಮ್ಮ ಬೊಮ್ಮ, ಕನ್ನಡ ಗೀತೆಗಳಾದ ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ, ಕುವೆಂಪು ಅವರ ಕುಣಿಯೋಣಾರು, ಕಾಂತಾರದ ಜನಪ್ರಿಯ ಹಾಡಾದ ವರಾಹರೂಪಂ,ತುಳು ಗೀತೆ ಎಂಚೆಂಚಿ ಪುಣ್ಣುಲು ಎಂಕುಲತ್ತ್ ಮೊದಲಾದ ಬಹುಭಾಷೆ ಮತ್ತು ಸಂಸ್ಕೃತಿಯ ಭಾವವನ್ನು ತಂಡ ನೃತ್ಯರೂಪದಲ್ಲಿ ಪ್ರದರ್ಶಿಸಿತು.
ಕೊನೆಯಲ್ಲಿ ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಕೃಷ್ಣಶರ್ಮ ಮತ್ತು ದಕ್ಷಿಣ ಕೊರಿಯಾ ವಿವಿಯ ಪ್ರತಿನಿಧಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಇವರನ್ನು ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು