5:15 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೊರಬದಲ್ಲಿ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ; ಸಮಾಜ ಸೇವೆಯಿಂದ ಸಂತೃಪ್ತಿ: ಅಬ್ದುಲ್ ರಹೆಮಾನ್

30/01/2024, 21:55

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮೊರಬ ಗ್ರಾಮದಲ್ಲಿ, ಸಮಾಜ ಸೇವಕ ಅಬ್ದುಲ್ ರಹೆಮನ್ ರವರ ನೇತೃತ್ವದಲ್ಲಿ ಜ30ರಂದು ಸ್ನೇಹಿತರ ಬಳಗದಿಂದ ಸತತ 7ನೇ ವರ್ಷದ ಸಮಾಜ ಸೇವಾರ್ಥ, “ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಶಿಬಿರ”
ಆಯೋಜಿಸಲಾಗಿತ್ತು.

ಶಿಬಿರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಸ್ನೇಹಿತರ ಬಳಗದ ಅಧ್ಯಕ್ಷ ಅಬ್ದುಲ್ ರಹೆಮಾನ್ ರವರು ಮಾತನಾಡಿದರು. ಸಮಾಜ ಸೇವೆಯಿಂದಲೇ ಆತ್ಮ ತೃಪ್ತಿ ದೊರಕಲಿದೆ, ಇದು ಸ್ನೇಹಿತರ ಬಳಗದ ದೇಯೋದ್ಧೇಶವಾಗಿದೆ. ಈ ನಿಟ್ಟಿನಲ್ಲಿ ಸತತ ಏಳನೇ ವರ್ಷಗಳಿಂದ ಶ್ರಮಿಸುತ್ತಿದೆ, ಅದಕ್ಕೆಲ್ಲಾ ಸಮಸ್ತ ಸ್ನೇಹಿತರ ಬಳಗದ ಸರ್ವ ಸದಸ್ಯರ ಶ್ರಮದಾನವೇ ಕಾರಣವಾಗಿದೆ. “ಸರ್ವೇ ಜನಃ ಸುಖೀನೋ ಭವಂತು” ಎಂಬ ಧೇಯ ದೊಂದಿಗೆ, ಸ್ನೇಹಿತರ ಬಳಗ ಸನಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು. ನೇತ್ರಲಕ್ಷ್ಮಿ ವೈದ್ಯಾಲಯ ಡಾಕ್ಟರ್ ದೇಶಪಾಂಡೆ ಹಾಗೂ ಸ್ನೇಹಿತರ ಬಳಗದ ಉಪಾಧ್ಯಕ್ಷ ಬಿ ಖಾದರ್ ಭಾಷಾ, ಸದಸ್ಯರಾದ ಅಬ್ದುಲ್ ವಾಹಿದ್, ಆಲಂ ಭಾಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನಾ ಘಟಕ, ಎನ್.ಎಸ್.ಎಸ್ ವಿಭಾಗದ ಅಧಿಕಾರಿ ಜಗದೀಶ್, ಪ್ರಾಂಶುಪಾಲರಾದ ಸುರೇಶ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಣ್ಣ, ಫೈರೋಜ್ ಆಲಂ, ಮೌಲ್ವಿ ಸಾಬ್, ಗ್ರಾಮ ಪಂಚಾಯ್ತಿ ಸದಸ್ಯ ಮೆಹಬೂಬ್ ಬಾಷಾ, ಗ್ರಾಮ ಪಂಚಾಯಿತಿ ಸದಸ್ಯ ಚನ್ನಬಸಪ್ಪ, ಗ್ರಾಮ ಪಂಚಾಯ್ತಿ ಸದಸ್ಯ ಹೊನ್ನೂರವಲಿ, ಮೊರಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಚಂದ್ರಪ್ಪ, ಜನಪ್ರತಿನಿಧಿ ಕೊಟ್ರೇಶ್ ಉಪಸ್ಥಿತರಿದ್ದರು. 110 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆ ಗೆ ಅಯ್ಕೆ ಮಾಡಲಾಯಿತು. ಒಟ್ಟು 230 ಜನರು ತಪಾಸಣೆ ಮಾಡಿ, ಓಪಿಡಿ ಸೇವೆ ಸಲ್ಲಿಸಲಾಯಿತು. ಶಾಲಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ, ಗ್ರಾಮದ ಹಿರಿಯರು ಮತ್ತು ಮುಖಂಡರು. ವಿವಿದ ಜನಪ್ರತಿನಿಧಿಗಳು, ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದು ಶಿಬಿರ ಯಶಸ್ಸಿಗೆ ಸಹರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು