5:44 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ

09/08/2021, 13:17

ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್‌ ಎಂಬ ಶಿಕ್ಷಕ ಪ್ರಾಜೆಕ್ಟ್‌ ವರ್ಕ್‌ ನೆಪದಲ್ಲಿ ವಿದ್ಯಾರ್ಥಿನಿಯನ್ನು ಉಪಾಯದಲ್ಲಿ ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ನಗ್ನ  ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ.

ರಾಯಚೂರು ಮೂಲದ ಈ ದುಷ್ಟ ಶಿಕ್ಷಕ ನಂತರ ಪದೇ ಪದೇ ವಿದ್ಯಾರ್ಥಿನಿಗೆ ಪೋಟೋ ತೋರಿಸಿ ಬ್ಲ್ಯಾಕ್ ಮೇಲ್ ನಡೆಸಿದ್ದಾನೆ.ಹಣ ತರುವಂತೆ ಪೀಡಿಸಿದ್ದಾನೆ. ಇದಕ್ಕೆಆತನ ಪತ್ನಿ ಕೂಡ ಸಾಥ್ ನೀಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. 

ಇದೀಗ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಿಕ್ಷಕ ಗುರುರಾಜ್‌ ಹಾಗೂ ಆತನ ಪತ್ನಿ ರಾಜೇಶ್ವರಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು