7:53 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಕಲ್ಲಡ್ಕ ರಾಮನಗರದಲ್ಲಿ ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಶಿಲಾನ್ಯಾಸ

31/01/2024, 21:52

ಬಂಟ್ವಾಳ(reporterkarnataka.com):ಮಂದಿರಗಳು ಪ್ರತಿಯೊಂದು ಊರಿನಲ್ಲಿಯೂ ಶ್ರದ್ಧಾಕೇಂದ್ರಗಳಾಗಿ ರೂಪುಗೊಳ್ಳಬೇಕು. ಅಯೋಧ್ಯೆಯಂತೆ ಬೆಳಗಬೇಕು. ಶ್ರೀ ರಾಮ ಎಲ್ಲರಿಗೂ ಆದರ್ಶವಾಗಬೇಕು. ಸಮಾಜದಲ್ಲಿ ಸಾಮರಸ್ಯವಾಗಿ ಸುಶಿಕ್ಷಿತರಾಗಬೇಕು ಎಂದು ವಿನಯ ಗುರೂಜಿ ಗೌರಿಗದ್ದೆ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಮಂದಿರ ರಾಮನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಶಿಲಾನ್ಯಾಸ ಸಂದರ್ಭದ ಧಾರ್ಮಿಕ ಸಭೆಯಲ್ಲಿ ಆಶೀರ್ಚನ ನೀಡಿದರು.


ಶ್ರೀ ರಾಮ ಕಾರುಣ್ಯ ಮೂರ್ತಿ. ಸದ್ಗುಣವಂತ, ಸೂರ್ಯವಂಶಜ. ಅವನ ಆದರ್ಶವನ್ನು ಮೈಗೂಡಿಸಿಕೊಂಡಿರುವ ಕಲ್ಲಡ್ಕ ಪ್ರಭಾಕರ ಭಟ್ಟರು ವಿದ್ಯಾಕೇಂದ್ರದ ಮೂಲಕ ಮಕ್ಕಳಲ್ಲಿ ಆದರ್ಶ ಸಂಸ್ಕೃತಿಯ ನ್ನು ಬೆಳೆಸುತ್ತಿದ್ದಾರೆ ಎಂದರು. ಕರಾವಳಿಯಲ್ಲಿ ದೈವಾರಾಧನಾ ಪದ್ಧತಿ ಕೌಟುಂಬಿಕ ಜೀವನವನ್ನು ಉಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅತಿಥಿಗಳಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀ ನಿವಾಸ ಪೂಜಾರಿ, ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಉದ್ಯಮಿ ಸಂತೋಷ ಜಿ.ಶೆಟ್ಟಿ ದಲಂಬಿಲ ಮುಂಬಯಿ,ಅನಂತ ಮೂರ್ತಿ ಸಿರ್ಸಿ ಭಾಗವಹಿಸಿದ್ದರು. ವಿನಯ ಗುರೂಜಿ ಶಿಲಾನ್ಯಾಸ ನೆರವೇರಿಸಿ ಶುಭ ಹಾರೈಸಿದರು. ಕಶೆಕೋಡಿ ಸೂರ್ಯ ಭಟ್ ಶಿಲಾನ್ಯಾಸ ವಿಧಿವಿಧಾನ ನೆರವೇರಿಸಿ ಕ್ಷೀರಾಭಿಷೇಕ ಮಾಡಿದರು.
ಪ್ರಮುಖರಾದ ಪದ್ಮನಾಭ ಕೊಟ್ಟಾರಿ, ಶಂಭು ಶೆಟ್ಟಿ, ಟಿ.ಜಿ.ರಾಜಾರಾಮ ಭಟ್, ರಘುನಾಥ ಸೋಮಯಾಜಿ , ನಾರಾಯಣ ಸೋಮಯಾಜಿ, ಬೃಜೇಶ್ ಚೌಟ ಮೊದಲಾದವರು ಪಾಲ್ಗೊಂಡರು. ಆರಂಭದಲ್ಲಿ ವಿನಯ ಗುರೂಜಿಯವರು ಡಾ.ಕಮಲಾ ಪ್ರಭಾಕರ ಭಟ್‌ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಮಂದಿರದ ಪದಾಧಿಕಾರಿಗಳಾದ ನಾಗೇಶ ಕಲ್ಲಡ್ಕ, ಚೆನ್ನಪ್ಪ ಕೋಟ್ಯಾನ್, ಕ.ಕೃಷ್ಣಪ್ಪ,, ಸುಜಿತ್ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣ ಕುಮಾರ್ ಕಾಯರ್ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು