7:51 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು