9:47 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು