4:27 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Traveling Story | ಗೇರ್‌ಲೆಸ್(ಸಾದಾ) ಸೈಕಲ್‌ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ

09/08/2021, 15:52

ಅನುಷ್ ಪಂಡಿತ್, ಮಂಗಳೂರು
ಗಣೇಶ್ ಅದ್ಯಪಾಡಿ, ಮಂಗಳೂರು
info.reporterkarnata@gmail.com

ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನುಭವವನ್ನು ಪಡೆದುಕೊಳ್ಳಬೇಕು ಎನ್ನುವ ಹಂಬಲದೊಂದಿಗೆ ಕೇರಳ ಮಣ ಪುರಂ‌ನ ಯುವಕ ಕಾಶ್ಮೀರಕ್ಕೆ ಹೊರಟಿದ್ದಾರೆ.

ಕೇರಳದಿಂದ ಕಾಶ್ಮೀರಕ್ಕೆ ಪ್ರವಾಸ ಹೊಸತೇನಲ್ಲ ಆದರೆ ಈ ತರುಣನ ಪ್ರವಾಸದ ವಿಧಾನವೇ ರೋಚಕವಾಗಿದೆ. ಸಾಮಾನ್ಯವಾಗಿ ಹೈ ಎಂಡ್ ಗೇರ್ ಸೈಕಲ್‌ಗಳಲ್ಲಿ ದೂರದೂರುಗಳಿಗೆ ಪ್ರವಾಸಕ್ಕೆ ಹೋಗುವುದು ಸಾಮಾನ್ಯ ಆದರೆ ಕೇರಳದ ಸಫಾನ್ ಎನ್ನುವ ಈ ಕ್ರೇಝಿಯೆಸ್ಟ್ ಯುವಕ ಹೊರಟ್ಟಿದ್ದು ಸಾಮಾನ್ಯ ಹೀರೊ ಸೈಕಲ್‌ನಲ್ಲಿ.

ಪ್ರವಾಸ ಎನ್ನುವುದು ಇವರಿಗೆ ಅತ್ಯಂತ ಪ್ರಿಯವಾದ ವಿಷಯ, ಇಲ್ಲಿಯವರೆಗೆ ಹಿಮಾಚಲ ಪ್ರದೇಶದ ಮನಾಲಿ ಸೇರಿದಂತೆ ಅನೇಕ ಕಡೆಗಳಿಗೆ ಭೇಟಿ ನೀಡಿದ್ದು, ಇದೇ ಮೊದಲ ಬಾರಿ ಸೈಕಲ್‌ನಲ್ಲಿ ಪ್ರವಾಸ ಹೊರಟಿದ್ದಾರೆ.

ಕೇರಳದಿಂದ ಏಳು ದಿನಗಳ ಹಿಂದೆ ಪ್ರಯಾಣ ಆರಂಭಿಸಿದ ಸಫಾನ್ ಇಂದು(ಆ.9) ಮಂಗಳೂರು ತಲುಪಿದ್ದಾರೆ. ಇವತ್ತು ಗೆಳೆಯನ ಮನೆಯಲ್ಲಿ ರೆಸ್ಟ್ ಮಾಡಿ ಮತ್ತೆ ಪಯಣ ಮುಂದುವರಿಸಲಿದ್ದಾರೆ. ಸುಮಾರು ಎರಡು ತಿಂಗಳ ಪ್ರವಾಸದ ಲೆಕ್ಕಾಚಾರ ಮಾಡಿಕೊಂಡಿರುವ ಇವರ ಸೈಕಲಿನಲ್ಲಿ ಮಲಗಲು ಚಾಪೆ, ಬ್ಯಾಗ್ ದಿನಬಳಕೆಗೆ ಬೇಕಾಗುವ ವಸ್ತುಗಳನ್ನು ಇಟ್ಟುಕೊಂಡಿದ್ದಾರೆ.


ಕಾಲಲ್ಲಿ ಶೂ ಅಥವಾ ಬೇರೆ ಯಾವುದೇ ಅನಕೂಲಕರ ಚಪ್ಪಲಿ ಇರದೆ ಸಾಮಾನ್ಯ ಚಪ್ಪಲಿ ಧರಿಸಿಕೊಂಡು, ಮಳೆ ಹಾಗೂ ಬಿಸಿಲಿನ ಕಣ್ಕಟ್ಟಿನ ಜೊತೆಗೆ ತಿರುವು-ಮುರುವು ಹಾಗೂ ಏರಿಳಿತಗಳ ದಾರಿಯಲ್ಲಿ ಧರೆಯ ಸ್ವರ್ಗಕ್ಕೆ ದೇವರನಾಡಿನಿಂದ ಹೊರಟ ಯುವಕನ ಈ ಧೈರ್ಯವನ್ನು ಮೆಚ್ಚಲೆಬೇಕು.

 

ಡಿಪ್ಲೊಮಾ ಕಲಿಯುತ್ತಿರುವ ಸಫಾನ್‌ ಈಗಿನ ಖಾಲಿ ಸಮಯದಲ್ಲಿ ಟ್ರಾವೆಲಿಂಗ್ ಹೊರಟಿದ್ದಾರೆ. ಸೈಕಲ್‌ನಲ್ಲಿ ಕೇರಳ ಟು ಕಾಶ್ಮೀರ್ ಎಂದು ಸ್ಟಿಕರ್ ಅಂಟಿಸಿಕೊಂಡಿದ್ದು Al_Azhar ಎನ್ನುವ ತಮ್ಮ ಇನ್ಸ್ಟಾ ಐಡಿಯನ್ನು ಮೆನ್ಶನ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು