6:10 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

Traveling Story | ಗೇರ್‌ಲೆಸ್(ಸಾದಾ) ಸೈಕಲ್‌ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ

09/08/2021, 15:52

ಅನುಷ್ ಪಂಡಿತ್, ಮಂಗಳೂರು
ಗಣೇಶ್ ಅದ್ಯಪಾಡಿ, ಮಂಗಳೂರು
info.reporterkarnata@gmail.com

ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನುಭವವನ್ನು ಪಡೆದುಕೊಳ್ಳಬೇಕು ಎನ್ನುವ ಹಂಬಲದೊಂದಿಗೆ ಕೇರಳ ಮಣ ಪುರಂ‌ನ ಯುವಕ ಕಾಶ್ಮೀರಕ್ಕೆ ಹೊರಟಿದ್ದಾರೆ.

ಕೇರಳದಿಂದ ಕಾಶ್ಮೀರಕ್ಕೆ ಪ್ರವಾಸ ಹೊಸತೇನಲ್ಲ ಆದರೆ ಈ ತರುಣನ ಪ್ರವಾಸದ ವಿಧಾನವೇ ರೋಚಕವಾಗಿದೆ. ಸಾಮಾನ್ಯವಾಗಿ ಹೈ ಎಂಡ್ ಗೇರ್ ಸೈಕಲ್‌ಗಳಲ್ಲಿ ದೂರದೂರುಗಳಿಗೆ ಪ್ರವಾಸಕ್ಕೆ ಹೋಗುವುದು ಸಾಮಾನ್ಯ ಆದರೆ ಕೇರಳದ ಸಫಾನ್ ಎನ್ನುವ ಈ ಕ್ರೇಝಿಯೆಸ್ಟ್ ಯುವಕ ಹೊರಟ್ಟಿದ್ದು ಸಾಮಾನ್ಯ ಹೀರೊ ಸೈಕಲ್‌ನಲ್ಲಿ.

ಪ್ರವಾಸ ಎನ್ನುವುದು ಇವರಿಗೆ ಅತ್ಯಂತ ಪ್ರಿಯವಾದ ವಿಷಯ, ಇಲ್ಲಿಯವರೆಗೆ ಹಿಮಾಚಲ ಪ್ರದೇಶದ ಮನಾಲಿ ಸೇರಿದಂತೆ ಅನೇಕ ಕಡೆಗಳಿಗೆ ಭೇಟಿ ನೀಡಿದ್ದು, ಇದೇ ಮೊದಲ ಬಾರಿ ಸೈಕಲ್‌ನಲ್ಲಿ ಪ್ರವಾಸ ಹೊರಟಿದ್ದಾರೆ.

ಕೇರಳದಿಂದ ಏಳು ದಿನಗಳ ಹಿಂದೆ ಪ್ರಯಾಣ ಆರಂಭಿಸಿದ ಸಫಾನ್ ಇಂದು(ಆ.9) ಮಂಗಳೂರು ತಲುಪಿದ್ದಾರೆ. ಇವತ್ತು ಗೆಳೆಯನ ಮನೆಯಲ್ಲಿ ರೆಸ್ಟ್ ಮಾಡಿ ಮತ್ತೆ ಪಯಣ ಮುಂದುವರಿಸಲಿದ್ದಾರೆ. ಸುಮಾರು ಎರಡು ತಿಂಗಳ ಪ್ರವಾಸದ ಲೆಕ್ಕಾಚಾರ ಮಾಡಿಕೊಂಡಿರುವ ಇವರ ಸೈಕಲಿನಲ್ಲಿ ಮಲಗಲು ಚಾಪೆ, ಬ್ಯಾಗ್ ದಿನಬಳಕೆಗೆ ಬೇಕಾಗುವ ವಸ್ತುಗಳನ್ನು ಇಟ್ಟುಕೊಂಡಿದ್ದಾರೆ.


ಕಾಲಲ್ಲಿ ಶೂ ಅಥವಾ ಬೇರೆ ಯಾವುದೇ ಅನಕೂಲಕರ ಚಪ್ಪಲಿ ಇರದೆ ಸಾಮಾನ್ಯ ಚಪ್ಪಲಿ ಧರಿಸಿಕೊಂಡು, ಮಳೆ ಹಾಗೂ ಬಿಸಿಲಿನ ಕಣ್ಕಟ್ಟಿನ ಜೊತೆಗೆ ತಿರುವು-ಮುರುವು ಹಾಗೂ ಏರಿಳಿತಗಳ ದಾರಿಯಲ್ಲಿ ಧರೆಯ ಸ್ವರ್ಗಕ್ಕೆ ದೇವರನಾಡಿನಿಂದ ಹೊರಟ ಯುವಕನ ಈ ಧೈರ್ಯವನ್ನು ಮೆಚ್ಚಲೆಬೇಕು.

 

ಡಿಪ್ಲೊಮಾ ಕಲಿಯುತ್ತಿರುವ ಸಫಾನ್‌ ಈಗಿನ ಖಾಲಿ ಸಮಯದಲ್ಲಿ ಟ್ರಾವೆಲಿಂಗ್ ಹೊರಟಿದ್ದಾರೆ. ಸೈಕಲ್‌ನಲ್ಲಿ ಕೇರಳ ಟು ಕಾಶ್ಮೀರ್ ಎಂದು ಸ್ಟಿಕರ್ ಅಂಟಿಸಿಕೊಂಡಿದ್ದು Al_Azhar ಎನ್ನುವ ತಮ್ಮ ಇನ್ಸ್ಟಾ ಐಡಿಯನ್ನು ಮೆನ್ಶನ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು