10:18 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕೊಂಕಣಿ ಖ್ಯಾತ ಸಾಹಿತಿ ಡಾ. ಜೆರಾಲ್ಡ್ ಪಿಂಟೊಗೆ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ: ಫೆ.17ರಂದು ಪ್ರದಾನ

02/02/2024, 19:09

ಮಂಗಳೂರು(reporterkarnataka.com):2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್ ಪಿಂಟೊ (ಜೆರಿ, ನಿಡ್ಡೋಡಿ) ಇವರನ್ನು ಆಯ್ಕೆ ಮಾಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕರಾದ ರಿಚರ್ಡ್ ಮೊರಾಸ್ ತಿಳಿಸಿದರು.


ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು.
ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಇದುವರೆಗೆ, ಜೆರಿ ನಿಡ್ಡೋಡಿ ಅವರ 6 ಕಾದಂಬರಿಗಳು, 75 ಕತೆಗಳು ಹಾಗೂ 900ಕ್ಕೂ ಮೇಲ್ಪಟ್ಟು ಲೇಖನಗಳು ಕೊಂಕಣಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ಕುಡ್ಮಿ ಕೊಂಕ್ಣಿ ಲೋಕ್‌ವೇದ್’ ಎಂಬ ಸಂಶೋಧನಾ ಗೃಂಥ ಹಾಗೂ ‘ವಿಸಾವ್ಯಾ ಶೆಕ್ಡಾö್ಯಚೆ ಕೊಂಕ್ಣಿ ಮ್ಹಾನ್ ಮನಿಸ್’ ಎಂಬ ಕೃತಿಯನ್ನು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಕಟಿಸಿದ್ದಾರೆ. ಅವರು ಬರೆದ ಇನ್ನಿತರ ಪುಸ್ತಕಗಳಲ್ಲಿ ತುಜೆಂ ಶಿಕಾಪ್, ತುಜಿ ವೃತ್ತಿ, ಗ್ಯಾಲಕ್ಸಿ, ವಿಶ್ವ್ ವಿಜ್ಞಾನ್ ಪ್ರಮುಖವಾಗಿವೆ.
ಅವರಿಗೆ ಕೊಂಕ್ಣಿ ಕುಟಮ್ ಬಾಹ್ರೇಯ್ನ್ , ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ದಾಯ್ಜಿ ದುಬಾಯ್, ದಿವೊ ಸಾಹಿತ್ಯ ಪ್ರಶಸ್ತಿ ಲಭಿಸಿವೆ.
‘ರಾಕ್ಣೊ’ ಸಂಪಾದಕೀಯ ಮಂಡಳಿಯ ಸದಸ್ಯರಾಗಿ, ‘ಆಮ್ಚೊ ಸಂದೇಶ್’ ಪತ್ರಿಕೆಯ ಸಂಪಾದಕರಾಗಿ, ‘ಮಿಲಾರ್‌ಚಿಂ ಲ್ಹಾರಾಂ’ ತ್ರೈ ಮಾಸಿಕದ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಕಥೊಲಿಕ್ ಸಭಾದ ಕೇಂದ್ರೀಯ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಉಡುಪಿಯಲ್ಲಿ ‘ಕೊಂಕ್ಣಿ ಭಾಸ್, ಸಾಹಿತ್ಯ್ ಕಲಾ ಅನಿ ಸಾಂಸ್ಕೃತಿಕ್ ಸಂಘಟನ್’ ಎಂಬ ಸಂಘಟನೆಯನ್ನು ಸ್ಥಾಪಿಸಿ ಅನೇಕ ಕೊಂಕಣಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಪ್ರಸ್ತುತ ಎಂ.ಸಿ.ಸಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 17, 2024ನೇ ಶನಿವಾರ ಸಂಜೆ 6.30ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ ಜರಗಲಿರುವುದು
ಪತ್ರಿಕಾಗೋಷ್ಠಿಯಲ್ಲಿ ಡೊಲ್ಫಿ ಎಫ್. ಲೋಬೊ( ಸಮಿತಿ ಸದಸ್ಯರು)
ಹೆನ್ರಿ ಮಸ್ಕರೇನ್ಹಸ್(ಸಮಿತಿಸದಸ್ಯರು)ಜೆ.ಎಫ್.ಡಿಸೋಜಾ(ಸಲಹಾ ಸಮಿತಿ ಸದಸ್ಯರು) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು