12:31 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ

03/02/2024, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ.


ತೋರಣಮಾವು ಗ್ರಾಮಕ್ಕೆ ಬೀಟಮ್ಮ ಟೀಮ್ ಲಗ್ಗೆಯಿಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದಿರಲು ಅನೌನ್ಸ್ ಮಾಡುತ್ತಿದೆ. ಅನಾವಶ್ಯಕವಾಗಿ ರಸ್ತೆ ಗಿಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ ಬೇಗನೆ ಕಾರ್ಮಿಕರು ಕಾಫಿ ತೋಟಕ್ಕೆ ಹೋಗದಿರಲು ಸೂಚನೆ ನೀಡಲಾಗಿದೆ.


ಯಾವುದೇ ಸಮಯದಲ್ಲಿ ಕಾಫಿ ತೋಟಕ್ಕೆ ನುಗ್ಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಳ್ಳಿಗಳನ್ನು ಸುತ್ತಿ
ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚನೆ ನೀಡುತ್ತಿದ್ದಾರೆ.
ಐದಾರು ಗ್ರಾಮಗಳ ವ್ಯಾಪ್ತಿಯಲ್ಲಿ 24 ಆನೆಗಳ ಸಂಚಾರ ಮಾಡುತ್ತಿವೆ ಎಂದು ಅಂದಾಜಿಸಲಾಗಿದೆ. ತೋರಣ ಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಕಾಡಾನೆಗಳ ಆತಂಕ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು