2:37 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ

03/02/2024, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ.


ತೋರಣಮಾವು ಗ್ರಾಮಕ್ಕೆ ಬೀಟಮ್ಮ ಟೀಮ್ ಲಗ್ಗೆಯಿಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದಿರಲು ಅನೌನ್ಸ್ ಮಾಡುತ್ತಿದೆ. ಅನಾವಶ್ಯಕವಾಗಿ ರಸ್ತೆ ಗಿಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ ಬೇಗನೆ ಕಾರ್ಮಿಕರು ಕಾಫಿ ತೋಟಕ್ಕೆ ಹೋಗದಿರಲು ಸೂಚನೆ ನೀಡಲಾಗಿದೆ.


ಯಾವುದೇ ಸಮಯದಲ್ಲಿ ಕಾಫಿ ತೋಟಕ್ಕೆ ನುಗ್ಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಳ್ಳಿಗಳನ್ನು ಸುತ್ತಿ
ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚನೆ ನೀಡುತ್ತಿದ್ದಾರೆ.
ಐದಾರು ಗ್ರಾಮಗಳ ವ್ಯಾಪ್ತಿಯಲ್ಲಿ 24 ಆನೆಗಳ ಸಂಚಾರ ಮಾಡುತ್ತಿವೆ ಎಂದು ಅಂದಾಜಿಸಲಾಗಿದೆ. ತೋರಣ ಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಕಾಡಾನೆಗಳ ಆತಂಕ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು