12:37 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಮಂಗಳೂರಿಗೆ ಸರಬರಾಜು ಆಗುವ ನೀರಿಗೆ ದಾರಿಯಲ್ಲೇ ಕನ್ನ: ಪಾಲಿಕೆಯಿಂದ ಅಕ್ರಮ ಸಂಪರ್ಕ ತೆರವು

03/02/2024, 21:58

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಸರಬರಾಜು ಮಾಡುವ ಮುಖ್ಯ ಪೈಪ್ ಲೈನಿಂದ ಮಾಡಲಾದ ಅಕ್ರಮ ಸಂಪರ್ಕವನ್ನು ಶನಿವಾರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.


ತುಂಬೆಯಿಂದ ಪಂಪ್‌ ಮಾಡಲಾಗುವ ಕುಡಿಯುವ ನೀರನ್ನು ಪಂಚಾಯತ್‌ ವ್ಯಾಪ್ತಿ ಮೂಲಕ ಹಾದು ಹೋಗಿರುವ ಮುಖ್ಯ ಕೊಳವೆಯಿಂದ ವಿವಿಧ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಟ್ಟಡ ರಚನೆಗೆ, ವಾಣಿಜ್ಯ ಉದ್ದೇಶಕ್ಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅನಧಿಕೃತ ಜೋಡಣೆ ಮೂಲಕ ನೀರು ಬಳಕೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿತ್ತು. ಇದರಿಂದಾಗಿ ಪಾಲಿಕೆ ವ್ಯಾಪ್ತಿಗೆ ನೀರಿನ ಪೂರೈಕೆಯ ಪ್ರಮಾಣ ಕಡಿಮೆಯಾಗುತ್ತಿದ್ದ ಪ್ರಯುಕ್ತ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವ ಹಿನ್ನೆಲೆಯಲ್ಲಿ ಶನಿವಾರ ಪಾಲಿಕೆ ಅಧಿಕಾರಿಗಳ 3 ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ನಡೆಸಲಾಯಿತು. ತುಂಬೆ, ಪುದು ಮತ್ತು ಅಡ್ಯಾರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪರಿಶೀಲಿಸಿದಾಗ ಅನಧಿಕೃತವಾಗಿ ಮುಖ್ಯ ಕೊಳವೆ ಮಾರ್ಗದಿಂದ ಕಟ್ಟಡ ರಚನೆಗೆ, ಕೃಷಿ ಚಟುವಟಿಕೆಗೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವ ನೀರಿನ ಅನಧಿಕೃತ ಜೋಡಣೆಗಳನ್ನು ಪೋಲೀಸ್‌ ಇಲಾಖೆ ಮತ್ತು ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆಯ ಮೂಲಕ ಕಡಿತಗೊಳಿಸಲಾಯಿತು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು