9:26 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕೋರಿಯಾರು: 19ನೇ ವರ್ಷದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ

05/02/2024, 14:22

ಬಂಟ್ವಾಳ(reporter Karnataka.com):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಸಿದ್ಧಕಟ್ಟೆ ವಲಯ ಶ್ರೀ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಕೋರಿಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಜರುಗಿತು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀಯುತ ಮಾಧವ ಗೌಡ ಯೋಜನಾಧಿಕಾರಿಗಳು ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಧಾರ್ಮಿಕ ಉಪನ್ಯಾಸವನ್ನು ನೀಡಿದ ಶ್ರೀ ಮುನಿರಾಜ ರೆಂಜಾಳ ಅವರು “ಮಾನವ ಧರ್ಮವನ್ನು ಪಾಲಿಸಿ. ನಿನಗೆ ನೀನು ಏನನ್ನು ಮಾಡಬಾರದೆಂದು ಬಯಸಿದರೆ ನೀನು ಅದನ್ನು ಯಾರಿಗೂ ಮಾಡಬೇಡ” ಎಂಬ ನುಡಿಮಾತನ್ನು ಹೇಳಿದರು.


ಪೂಜ್ಯರ ಸಂದೇಶವನ್ನು ಮೇಲ್ವಿಚಾರಕರಾದ ಶಿವರಂಜನ್ ಕೆ. ಅವರು ಪ್ರಸ್ತಾಪಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಪಾಲ್ ಗೌಡ ಕೊರಿಯಾರು, ಸುರೇಶ ಅಂಚನ್, ಸದಾನಂದ ಶೀತಲ್, ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಭಕ್ತಾದಿಗಳು,ಸೇವಾ ಪ್ರತಿನಿಧಿಗಳು ಹಾಗೂ ವಿಎಲ್ಇ ಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಧಾಕರ್ ಶೆಟ್ಟಿ ನಿರ್ವಹಿಸಿದರು.ಸುರೇಶ್ ಅಂಚನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು