4:22 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೋರಿಯಾರು: 19ನೇ ವರ್ಷದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ

05/02/2024, 14:22

ಬಂಟ್ವಾಳ(reporter Karnataka.com):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಸಿದ್ಧಕಟ್ಟೆ ವಲಯ ಶ್ರೀ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಕೋರಿಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಜರುಗಿತು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀಯುತ ಮಾಧವ ಗೌಡ ಯೋಜನಾಧಿಕಾರಿಗಳು ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಧಾರ್ಮಿಕ ಉಪನ್ಯಾಸವನ್ನು ನೀಡಿದ ಶ್ರೀ ಮುನಿರಾಜ ರೆಂಜಾಳ ಅವರು “ಮಾನವ ಧರ್ಮವನ್ನು ಪಾಲಿಸಿ. ನಿನಗೆ ನೀನು ಏನನ್ನು ಮಾಡಬಾರದೆಂದು ಬಯಸಿದರೆ ನೀನು ಅದನ್ನು ಯಾರಿಗೂ ಮಾಡಬೇಡ” ಎಂಬ ನುಡಿಮಾತನ್ನು ಹೇಳಿದರು.


ಪೂಜ್ಯರ ಸಂದೇಶವನ್ನು ಮೇಲ್ವಿಚಾರಕರಾದ ಶಿವರಂಜನ್ ಕೆ. ಅವರು ಪ್ರಸ್ತಾಪಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಪಾಲ್ ಗೌಡ ಕೊರಿಯಾರು, ಸುರೇಶ ಅಂಚನ್, ಸದಾನಂದ ಶೀತಲ್, ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಭಕ್ತಾದಿಗಳು,ಸೇವಾ ಪ್ರತಿನಿಧಿಗಳು ಹಾಗೂ ವಿಎಲ್ಇ ಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಧಾಕರ್ ಶೆಟ್ಟಿ ನಿರ್ವಹಿಸಿದರು.ಸುರೇಶ್ ಅಂಚನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು