10:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ

05/02/2024, 20:00

ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳಾದ ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ” ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್” ಸ್ಟ್ಯಾನಿ ಮೆಂಡೊನ್ಸಾ, ಆಲ್ಫ್ರೆಡ್ ಬೆನ್ನಿಸ್ , ರವಿ ಪಿಂಟೊ, ಸಂತೋಷ್ ಸಿಕ್ವೆರಾ, ಆಂಡ್ರಿಯಾ ಸಿಕ್ವೆರಾ, ಡಾ ಪ್ರೀತಿ ಡಿಸೋಜ, ಜೊನ್ ಡಿ ಸಿಲ್ವಾ , “ಫೆಲಿಕ್ಸ್” ಮೊರಾಸ್ ಉಪಸ್ಥಿತರಿದ್ದರು.
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ರೂ ಐದು ಲಕ್ಷ ಚೆಕ್ , ಆಲ್ಫ್ರೆಡ್ ಬೆನ್ನಿಸ್ ಹಾಗೂ ಸ್ಟ್ಯಾನಿ ಮೆಂಡೊನ್ಸಾ ವ| ಫಾ ಆಂಡ್ರ್ಯೂ ಲಿಯೋ ಡಿಸೋಜರವರಿಗೆ ಹಸ್ತಾಂತರ ಮಾಡಿದರು.
ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಸ್ವಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ಅರ್ಬನ್ ಗ್ರೂವ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವು ಉಚಿತ ಪ್ರವೇಶವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು